
ಪಣಜಿ: ರಾಜ್ಯದಲ್ಲಿ ಗೋಮಾಂಸದ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಬಿಜೆಪಿ ನೇತೃತ್ವದ ಗೋವಾ ಸರ್ಕಾರ ಹೇಳಿದೆ.
ಇಂದು ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಮನೋಹರ್ ಪರ್ರಿಕರ್, ಗೋವಾದಲ್ಲಿ ಗೋಮಾಂಸ ಸಾಕಾಷ್ಟು ಪ್ರಮಾಣದಲ್ಲಿ ಲಭ್ಯವಾಗುವಂತೆ ಕ್ರಮಕೈಗೊಳ್ಳುವುದಾಗಿ ಖಚಿತಪಡಿಸಿದ್ದಾರೆ. ಒಂದು ವೇಳೆ ಕೊರತೆಯಾದಲ್ಲಿ ಅಕ್ಕಪಕ್ಕದ ರಾಜ್ಯಗಳಿಂದ ಗೋಮಾಂಸವನ್ನು ಆಮದು ಮಾಡಿಕೊಳ್ಳುವುದಾಗಿ ಅವರು ಹೇಳಿದ್ದಾರೆ.
ಬೆಳಗಾವಿ ಹಾಗೂ ಇನ್ನಿತರ ಸ್ಥಳಗಳಿಂದ ಗೋಮಾಂಸವನ್ನು ತರಿಸುವ ಆಯ್ಕೆ ನಮ್ಮ ಮುಂದಿದೆ ಎಂದು ಅವರು ಹೇಳಿದ್ದಾರೆ.
ಹೊರರಾಜ್ಯಗಳಿಂದ ಬರುವ ಗೋಮಾಂಸದ ಗುಣಮಟ್ಟವನ್ನು ತಜ್ಞ ವೈದ್ಯರ ತಂಡವು ಪರಿಶೀಲಿಸುವುದು ಎಂದು ಅವರುಸದನಕ್ಕೆ ತಿಳಿಸಿದ್ದಾರೆ.
ಪ್ರತಿಯೊಬ್ಬರಿಗೂ ಗೋಮಾಂಸ ಸೇವಿಸುವ ಹಕ್ಕಿದೆ ಎಂದು ಕಳೆದ ವಾರ ಕೇಂದ್ರ ಸಚಿವ ರಾಮದಾಸ್ ಅಥಾವಲೆ ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.