ಗುಡುಗಿದ ಶಾ: ದೇಶದಾದ್ಯಂತ ನೆಲೆಸಿರುವ ಅಕ್ರಮ ವಲಸಿಗರಲ್ಲಿ ನಡುಕ ಆರಂಭ!

Published : Sep 10, 2019, 10:19 AM IST
ಗುಡುಗಿದ ಶಾ: ದೇಶದಾದ್ಯಂತ ನೆಲೆಸಿರುವ ಅಕ್ರಮ ವಲಸಿಗರಲ್ಲಿ ನಡುಕ ಆರಂಭ!

ಸಾರಾಂಶ

ಎನ್‌ಇಡಿಎ ಸಮಾವೇಶದಲ್ಲಿ ಗೃಹ ಸಚಿವ ಅಮಿತ್‌ ಶಾ ಎಚ್ಚರಿಕೆ| ದೇಶದೆಲ್ಲೆಡೆಯಿಂದ ಅಕ್ರಮ ವಲಸಿಗರ ಗಡೀಪಾರು: ಶಾ| ದೇಶಾದ್ಯಂತ ನೆಲೆಸಿರುವ ಅಕ್ರಮ ವಲಸಿಗರಲ್ಲಿ ನಡುಕ

ಗುವಾಹಟಿ[ಸೆ.10]: ಅಸ್ಸಾಂನಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಆರ್‌ಸಿ) ಅಂತಿಮ ಪಟ್ಟಿಪ್ರಕಟಗೊಂಡ ಬೆನ್ನಲ್ಲೇ, ಕೇವಲ ಅಸ್ಸಾಂ ಅಷ್ಟೇ ಅಲ್ಲ ಇಡೀ ದೇಶದಿಂದಲೇ ಅಕ್ರಮ ವಲಸಿಗರನ್ನು ಗಡೀಪಾರು ಮಾಡಲು ಸರ್ಕಾರ ಉದ್ದೇಶಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೋಮವಾರ ಹೇಳಿದ್ದಾರೆ.

ಗುವಾಹಟಿಯಲ್ಲಿ ನಾಥ್‌ರ್‍ ಈಸ್ಟ್‌ ಡೆಮೊಕ್ರಾಟಿಕ್‌ ಅಲಯನ್ಸ್‌ (ಎನ್‌ಇಡಿಎ)ನ ನಾಲ್ಕನೇ ಸಮಾವೇಶ ಉದ್ದೇಶಿಸಿ ಮಾತನಾಡಿದ ಶಾ, ಈಶಾನ್ಯ ರಾಜ್ಯಗಳಲ್ಲಿ ಹಿಂದಿನ ಕಾಂಗ್ರೆಸ್‌ ಸರ್ಕಾರಗಳ ವೈಫಲ್ಯದಿಂದಾಗಿ ಸುದೀರ್ಘಕಾಲದ ಉಗ್ರಗಾಮಿತ್ವ ನೆಲೆಸಿತ್ತು. ದೇಶದ ಇತರ ರಾಜ್ಯಗಳಿಂದ ಈಶಾನ್ಯ ರಾಜ್ಯಗಳನ್ನು ದೂರ ಇಡಲಾಗಿತ್ತು. ಈಶಾನ್ಯ ರಾಜ್ಯಗಳ ಬಗ್ಗೆ ಕಾಂಗ್ರೆಸ್‌ ಗಮನ ಹರಿಸಲಿಲ್ಲ. ಆ ಪಕ್ಷ ಒಡೆದ ಆಳುವ ನೀತಿಯಲ್ಲಿ ಯಾವಾಗಲೂ ನಂಬಿಕೆ ಹೊಂದಿದೆ. ಹೀಗಾಗಿ ಉಗ್ರವಾದ ಬೆಳೆಯಲು ಕಾರಣವಾಯಿತು ಎಂದು ಅಮಿತ್‌ ಶಾ ಪ್ರತಿಪಾದಿಸಿದ್ದಾರೆ.

371ನೇ ಕಲಂ ರದ್ದು ಮಾಡಲ್ಲ: ಅಮಿತ್ ಶಾ ಸ್ಪಷ್ಟನೆ

ಅಮಿತ್‌ ಶಾ ಅವರ ಭಾಷಣ ಅಕ್ರಮ ವಲಸಿಗರ ಬಗ್ಗೆಯೇ ಗಮನ ಕೇಂದ್ರೀಕರಿಸಿದ್ದರೂ, ಕಾರ್ಯಕ್ರಮದಲ್ಲಿ ಉಪಸ್ಥಿತರಿಂದ ನಾಗಾಲ್ಯಾಂಡ್‌ ಮತ್ತು ಮೇಘಾಲಯ ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಪೌರತ್ವ (ತಿದ್ದುಪಡಿ) ಮಸೂದೆಯ ಬಗ್ಗೆ ತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ. ಕಾನೂನು ಜಾರಿಗೂ ಮುನ್ನ ಎಲ್ಲಾ ರಾಜ್ಯಗಳನ್ನು ವಿಶ್ವಾಸಕ್ಕೆ ಪಡೆಯುವಂತೆ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು