
ಬೆಂಗಳೂರು(ಜು.12): ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೆಚ್ಚಿನ ಸರ್ಕಾರಿ ನಿವಾಸ ಕಾವೇರಿ ಇದೀಗ ಅವರ ಪಾಲಿಗೆ ಬಂದಿಲ್ಲ. ನೂತನ ಸರ್ಕಾರ ರಚನೆ ಬಳಿಕ ಕಾವೇರಿ ಸಚಿವ ಕೆ.ಸಿ. ಜಾರ್ಜ್ ಪಾಲಿಗೆ ಒಲಿದಿದೆ.
ಆದರೆ ಸಿಎಂ ಸ್ಥಾನದಿಂದ ಕೆಳಗಿಳಿದರೂ ಸಿದ್ದು ಇನ್ನೂ ಕಾವೇರಿ ನಿವಾಸ ಖಾಲಿ ಮಾಡಿಲ್ಲ. ಈ ನಿವಾಸದ ಮೇಲೆ ಡಿಸಿಎಂ ಪರಮೇಶ್ವರ್ ಕೂಡ ಕಣ್ಣು ಹಾಕಿದ್ದರು ಎಂದು ಹೇಳಲಾಗುತ್ತಿದೆ.
ಆದರೆ ಅಂತಿಮವಾಗಿ ಕಾವೇರಿ ನಿವಾಸ ಸಚಿವ ಕೆ.ಸಿ. ಜಾರ್ಜ್ ಅವರಿಗೆ ನೀಡಲಾಗಿದೆ.ಈ ಕುರಿತು ಇನ್ನೆರಡು ದಿನಗಳಲ್ಲಿ ಶಿಷ್ಟಾಚಾರ ಇಲಾಖೆಯಿಂದ ಅಧಿಕೃತ ಪ್ರಕಟಣೆ ಕೂಡ ಹೊರಬೀಳಲಿದೆ.
ಆದರೆ ಒಂದು ವೇಳೆ ಕಾವೇರಿ ನಿವಾಸ ಜಾರ್ಜ್ ಅವರಿಗೆ ಒಲಿದರೆ ಅದನ್ನು ಅವರು ಸಿದ್ದರಾಮಯ್ಯ ಅವರಿಗೇ ಮರಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಸಿದ್ದು ಮತ್ತೆ ಕಾವೇರಿಯಲ್ಲೇ ಉಳಿಯಲಿದ್ದಾರಾ ಅಥವಾ ಕಾವೇರಿ ಬಿಟ್ಟು ಹೊರ ಬರಲಿದ್ದಾರಾ ಎಂಬುದು ಎಲ್ಲರ ಕುತೂಹಲ ಕೆರಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.