ಲಾಲು ಮತ್ತು ನಿತೀಶ್ ಮೈತ್ರಿ ಖತಂ?

Published : Jul 17, 2017, 09:54 AM ISTUpdated : Apr 11, 2018, 01:01 PM IST
ಲಾಲು ಮತ್ತು ನಿತೀಶ್ ಮೈತ್ರಿ ಖತಂ?

ಸಾರಾಂಶ

ಕಳೆದೊಂದು ತಿಂಗಳಿನಿಂದ ಬಿಹಾರದ ಆಡಳಿತಾರೂಢ ಜೆಡಿಯು- ಆರ್‌ಜೆಡಿ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಬಹುತೇಕ ಅಂತಿಮ ಹಂತ ತಲುಪಿದ್ದು, ಆರ್‌ಜೆಡಿ ಜೊತೆಗಿನ ಮೈತ್ರಿ ಮುರಿಯಲು, ಬಿಹಾರ ಸಿಎಂ ನಿತೀಶ್ ಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಪಟನಾ(ಜು.17): ಕಳೆದೊಂದು ತಿಂಗಳಿನಿಂದ ಬಿಹಾರದ ಆಡಳಿತಾರೂಢ ಜೆಡಿಯು- ಆರ್‌ಜೆಡಿ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಬಹುತೇಕ ಅಂತಿಮ ಹಂತ ತಲುಪಿದ್ದು, ಆರ್‌ಜೆಡಿ ಜೊತೆಗಿನ ಮೈತ್ರಿ ಮುರಿಯಲು, ಬಿಹಾರ ಸಿಎಂ ನಿತೀಶ್ ಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸೋಮವಾರ ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ, ಭಾನುವಾರ ಆರ್‌ಜೆಡಿ ಮತ್ತು ಜೆಡಿಯು ಶಾಸಕಾಂಗ ಪಕ್ಷದ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗಿಂತ ಹೆಚ್ಚಾಗಿ, ರಾಜ್ಯ ರಾಜಕೀಯದ ಕುರಿತೇ ಚರ್ಚೆ ನಡೆಯಿತು ಎನ್ನಲಾಗಿದೆ. ಆರ್‌ಜೆಡಿ ಸಭೆಯಲ್ಲಿ, ಈ ಹಿಂದಿನಂತೆಯೇ ಡಿಸಿಎಂ ತೇಜಸ್ವಿ ಯಾದವ್ ಅವರ ರಾಜೀನಾಮೆ

ಪಡೆಯದೇ ಇರುವ ನಿರ್ಧಾರಕ್ಕೆ ಪಕ್ಷ ಬಂದಿದೆ. ಮತ್ತೊಂದೆಡೆ ಈ ಮಾಹಿತಿ ಪಡೆದ ಬಿಹಾರ ಸಿಎಂ, ಜೆಡಿಯು ನಾಯಕ ನಿತೀಶ್ ಕುಮಾರ್, ಭ್ರಷ್ಟಾಚಾರ ಪ್ರಕರಣದಲ್ಲಿ ಆರ್‌ಜೆಡಿ ಕಠಿಣ ನಿಲುವು ತಳೆಯದ ಕಾರಣ, ಅವರೊಂದಿಗಿನ ಮೈತ್ರಿ ಮುರಿದುಕೊಳ್ಳುವುದೇ ಒಳಿತು ಎಂಬ ಅಭಿಪ್ರಾಯವನ್ನು ಸಭೆಯಲ್ಲಿ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.

ಒಂದು ವೇಳೆ ಮೈತ್ರಿ ಮುರಿದು ಬಿದ್ದಿದ್ದೇ ಆದಲ್ಲಿ, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಎದುರಿಸಲು ಮಹಾಮೈತ್ರಿ ಮಾಡಿಕೊಳ್ಳಲು ಉದ್ದೇಶಿಸಿದ್ದ ಕಾಂಗ್ರೆಸ್‌ನ ಕನಸಿಗೆ ಭಾರೀ ಹೊಡೆತ ಬೀಳಲಿ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ನಾಯಿ-ನರಿಗಳು ಕರವೇ ಬಗ್ಗೆ ಮಾತಾಡಿದ್ರೆ ಏನ್‌ ಹೇಳೋಕೆ ಆಗುತ್ತೆ..' ಸುದೀಪ್‌ ಭೇಟಿ ಕುರಿತ ವಿವಾದದ ಬಗ್ಗೆ ನಾರಾಯಣ ಗೌಡ ತಿರುಗೇಟು
ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ