ಸಂಪುಟ ರಚನೆ ನಂತರ ‘ಹೊಸ ಮಿಷನ್’ ; ಬಿಜೆಪಿ ಘೋಷಣೆ

Published : Jul 28, 2019, 11:51 PM ISTUpdated : Jul 28, 2019, 11:54 PM IST
ಸಂಪುಟ ರಚನೆ ನಂತರ ‘ಹೊಸ ಮಿಷನ್’ ; ಬಿಜೆಪಿ ಘೋಷಣೆ

ಸಾರಾಂಶ

ಕರ್ನಾಟಕದ ರಾಜಕಾರಣದ ಬೆಳವಣಿಗೆಗಳು ಉಳಿದ ರಾಜ್ಯಗಳ ಮೇಲೂ ಪರಿಣಾಮ ಬೀರುತ್ತಿವೆ. ಮಧ್ಯಪ್ರದೇಶದಲ್ಲೂ ರಾಜಕೀಯ ಬದಲಾವಣೆ ಸೂಚನೆಗಳು ಸಿಗುತ್ತಿವೆ.

ಭೂಪಾಲ್ [ಜು. 28] ಕರ್ನಾಟಕದಲ್ಲಿ ಸಂಪುಟ ರಚನೆ ಮುಗಿದ ಮೇಲೆ ‘ಹೊಸ ಮಿಷನ್’ ಗೆ ಚಾಲನೆ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ, ಹೇಳಿದ್ದಾರೆ.

ಮಧ್ಯ ಪ್ರದೇಶದ  ಕಾಂಗ್ರೆಸ್ ಆಡಳಿತದ ಬಗ್ಗೆ ಮಾತನಾಡಿ,  ಕಮಲ್ ನಾಥ್ ನೇತೃತ್ವದ ಸರ್ಕಾರವನ್ನು ಬೀಳಿಸುವುದು ನಮ್ಮ ಮುಂದಿರುವ  ಉದ್ದೇಶ ಖಂಡಿತ ಅಲ್ಲ.  ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಅನಿಶ್ಚಿತತೆ ಮತ್ತು ಗೊಂದಲದಲ್ಲಿದ್ದಾರೆ. ಕರ್ನಾಟಕದಲ್ಲಿ ಸಂಪುಟ ರಚನೆ ಬಳಿಕ ಹೊಸ ಮಿಷನ್  ಆರಂಭಿಸಲಾಗುವುದು ಎಂದರು.

ಮಧ್ಯಪ್ರದೇಶದಲ್ಲಿ ಆಪರೇಶನ್ ಹಸ್ತ?

ಇಲ್ಲಿನ ಕಾಂಗ್ರೆಸ್ ಶಾಸಕರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ. ಕಾಂಗ್ರೆಸ್ ಸರಕಾರಗಳು ಅವರ ಕೆಟ್ಟ ನೀತಿಯಿಂದಲೇ ಬಿದ್ದುಹೋಗುತ್ತಿವೆ ಎಂದರು. ಕೆಲ ದಿನಗಳ ಹಿಂದೆ ಇಬ್ಬರು ಬಿಜೆಪಿ ಶಾಸಕರು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪರವಾಗಿ ನಿಂತು ಮಸೂದೆಯೊಂದರ ಪರ ವೋಟ್ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು