
ನವದೆಹಲಿ : ವಿಶ್ವ ಹಿಂದೂ ಪರಿಷತ್ ಮಾಜಿ ಮುಖಂಡ ಪ್ರವೀಣ್ ತೊಗಾಡಿಯಾ ಹೊಸ ಪಕ್ಷವನ್ನು ಆರಂಭ ಮಾಡುವುದಾಗಿ ಹೇಳಿದ್ದಾರೆ. ಜೂನ್ 24ರಂದು ತಮ್ಮ ಹೊಸ ಪಕ್ಷಕ್ಕೆ ಚಾಲನೆ ನೀಡುವುದಾಗಿ ಹೇಳಿದರು.
ಇನ್ನು ಇದೇ ವೇಳೆ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಜನರ ಭರವಸೆಗಳನ್ನು ಈಡೇರಿಸುವಲ್ಲಿಯೂ ಹಿಂದೆ ಉಳಿದಿದೆ. ಪ್ರಧಾನಿ ಮೋದಿ ಸರ್ಕಾರದ ಸಾಧನೆ ಶೇ. - 25ರಷ್ಟಿದ್ದು, ಅತ್ಯಂತ ಕೆಳಮಟ್ಟದಲ್ಲಿದೆ ಎಂದು ಗ್ರೇಡ್ ನೀಡಿದ್ದಾರೆ. ಅಲ್ಲದೇ ಕೆಲವೊಂದು ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಹೇಳಿದಂತೆ ನಡೆಯದೇ ಯೂ ಟರ್ನ್ ಹೊಡೆದಿದ್ದಾರೆ. ಹಿಂದುತ್ವ ಐಡಿಯಾಲಜಿಯನ್ನು ಅನುಸರಿಸುವ ಅನೇಕರಿಗೆ ಅವರ ಕೆಲ ವಿಚಾರಗಳು ನೋವನ್ನುಂಟು ಮಾಡಿವೆ ಎಂದರು.
ಅಲ್ಲದೇ ಇದೇ ವೇಳೆ ರೈತರ ಬಗ್ಗೆಯೂ ಮಾತನಾಡಿದ ಅವರು ರೈತ ಬೆಳೆದ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಘೋಷಣೆ ಮಾಡಬೇಕು. ಅಲ್ಲದೇ ಅವರಿಗೆ ಉತ್ಪಾದನೆಗೆ ಆದ ವೆಚ್ಚಕ್ಕಿಂತ ಶೇ.50ರಷ್ಟು ಹೆಚ್ಚು ಹಣ ಸಿಗುವಂತಾಗಬೇಕು ಎಂದರು.
ಇನ್ನು ಗೋ ಹತ್ಯೆ ನಿಷೇಧ ಕಾಯ್ದೆ ಹಾಗೂ ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡುವ ವಿಚಾರದ ಬಗ್ಗೆಯೂ ಪ್ರಸ್ತಾಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.