ಅತೃಪ್ತರು ವಾಪಸಾದರೆ ರೇವಣ್ಣ ರಾಜೀನಾಮೆ : JDS ನಾಯಕ

Published : Jul 17, 2019, 10:38 AM IST
ಅತೃಪ್ತರು ವಾಪಸಾದರೆ ರೇವಣ್ಣ ರಾಜೀನಾಮೆ :  JDS ನಾಯಕ

ಸಾರಾಂಶ

ರಾಜ್ಯ ರಾಜಕೀಯದಲ್ಲಿ ಡೋಲಾಯಮಾನ ಸ್ಥಿತಿ ಇದೆ. ಸರ್ಕಾರ ಭವಿಷ್ಯದ ಬುಡ ಅನುಗಾಡುತ್ತಿದೆ. ಇದೇ ವೇಳೆ ಅತೃಪ್ತರು ವಾಪಸಾದಲ್ಲಿ ರೇವಣ್ಣಗೆ ರಾಜೀನಾಮೆ ಕೊಡಿಸುವುದಾಗಿ ಜೆಡಿಎಸ್ ಮುಖಂಡರೋರ್ವರು ಹೇಳಿದ್ದಾರೆ. 

ಹಾಸನ  [ಜು.17]: ಅತೃಪ್ತ ಮುಖಂಡರು ವಾಪಸಾದಲ್ಲಿ ರೇವಣ್ಣಗೆ ಹೇಳಿ ರಾಜೀನಾಮೆ ಕೊಡಿಸುತ್ತೇವೆ ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ರಾಮಸ್ವಾಮಿ, ರಾಜೀನಾಮೆ ನೀಡಿ ಹೋದವರೆಲ್ಲಾ ಆಪಾದನೆ ಮಾಡಿ ತೆರಳಿದ್ದಾರೆ. ಈ ಆರೋಪಗಳೆಲ್ಲಾ ನೆಪ ಮಾತ್ರ. ಬಿಜೆಪಿಗೆ ಹೋಗಬೇಕು ಎನ್ನುವುದು ಮುಖ್ಯ ಕಾರಣ ಎಂದು ಆರೋಪಿಸಿದರು.

ಇನ್ನು ರಾಜ್ಯದಲ್ಲಿ  ಕಾಂಗ್ರೆಸ್- ಜೆಡಿಎಸ್ ಮೈತ್ರಿಯಲ್ಲಿ ಲೋಪಗಳು ಇರುವುದು ನಿಜ ಎಂದು ಹೇಳಿದ ರಾಮಸ್ವಾಮಿ,  ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳೋಣ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಆದರೆ ಈಗ ಅಸಮಾಧಾನ ಹೊರಬಿದ್ದು, ರಾಜಕೀಯ ಸ್ಥಿತಿ ಹದಗೆಟ್ಟಿದೆ ಎಂದರು. ರೇವಣ್ಣ ರಾಜಕೀಯದ ಬಗ್ಗೆಯೂ ಪ್ರಸ್ತಾಪಿಸಿದ ಶಾಸಕ, ಅವರು ಹೆಚ್ಚು ಸ್ಪೀಡ್ ರಾಜಕಾರಣಿ. ವೇಗ ಹೆಚ್ಚಾದಾಗ ಹೀಗೆಲ್ಲಾ ಆಗುವುದು ಖಚಿತ ಎಂದರು.

ಹೆಚ್ಚು ನಂಬಿಕಸ್ಥರೆಲ್ಲಾ ಕೈ ಕೊಟ್ಟು ಹೋದರು.  ಶಾಸಕ ಎಂಟಿಬಿ ನಾಗರಾಜ್ ಸಿದ್ರಾಮಣ್ಣ ಎನ್ನುತ್ತಿದ್ದರು. ಆದರೆ ಅವರೂ ಕೈ ಕೊಟ್ಟು ಓಡಿಹೋದರು. ಎಷ್ಟಾದರೂ ಹೊಗಳು ಭಟರು ಅಪಾಯಕಾರಿಯೇ ಎಂದರು. 

ಇನ್ನು ತಮ್ಮ ರಾಜಕಾರಣದ ಬಗ್ಗೆಯೂ ಮಾತನಾಡಿದ ರಾಮಸ್ವಾಮಿ  ನಾನು ಸ್ವಾಸ್ಥ್ಯ ಕಾಪಾಡಿಕೊಂಡು ಬಂದಿದ್ದೇನೆ . ನನಗೆ ನನ್ನ ಕ್ಷೇತ್ರವೇ ರೆಸಾರ್ಟ್ . ಇದನ್ನು ಬಿಟ್ಟು ಎಲ್ಲಿಯೂ ತೆರಳುವ ಮಾತೇ ಇಲ್ಲ, ಆದರೆ ರಾಜ್ಯ ರಾಜಕೀಯ ವಿಷಮ ಸ್ಥಿತಿಯಲ್ಲಿರುವುದಾಗಿ ಮಾತ್ರ ಹೇಳುವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌
ಭಗವದ್ಗೀತೆ ಬೋಧನೆ ಪ್ರಸ್ತಾಪ ಹಿಂದೆ ಎಚ್ಜಿಕೆ ಅಜೆಂಡಾ : ಮಧು ಬಂಗಾರಪ್ಪ