
ನವದೆಹಲಿ[ಸೆ.12]: ಮಾಜಿ ಕ್ರಿಕೆಟರ್ ಹಾಗೂ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಪ್ರಕರಣವೊಂದರಲ್ಲಿ ಜೈಲು ಶಿಕ್ಷೆ ಅನುಭವಿಸುವ ಸಾಧ್ಯತೆಯಿದೆ.
ಸಿಧು ಅವರ 1988ರ ಗಲಾಟೆಯೊಂದರ ಪ್ರಕರಣಕ್ಕೆ ಮರುಜೀವ ನೀಡಲು ಸುಪ್ರಿಂ ಕೋರ್ಟ್ ಚಿಂತಿಸಿದ್ದು, ಮಾಜಿ ಕ್ರಿಕೆಟರ್ ಜೈಲಿಗೆ ಹೋಗೊ ಭವಿಷ್ಯ ಶೀಘ್ರದಲ್ಲೇ ನಿರ್ಧಾರವಾಗಲಿದೆ.
ಈ ಪ್ರಕರಣದ ಮರು ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಿಧು ಅವರಿಗೆ ನೋಟಿಸ್ ನೀಡಿದೆ. ನ್ಯಾಯಮೂರ್ತಿ ಎ.ಎಂ.ಕಾನ್ವಿಲ್ಕರ್ ಹಾಗೂ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠ ನೋಟಿಸ್ ವಿತರಿಸುವ ಆದೇಶ ನೀಡಿದೆ. 1988 ರಲ್ಲಿ ಗಲಾಟೆಯೊಂದರ ಪ್ರಕರಣದಲ್ಲಿ ಅಪರಾಧಿಯಾಗಿದ್ದು 304[2] ಸೆಕ್ಷನ್ ಅನ್ವಯ ಹತ್ಯೆಯಲ್ಲದ ಶಿಕ್ಷಾರ್ಹ ಅಪರಾಧವಾಗಿದೆ ಎನ್ನಲಾಗಿದೆ.
1988 ಡಿಸೆಂಬರ್ 27 ರಂದು ಪಾಟಿಯಾಲದಲ್ಲಿ ಸಿಧು ಅವರು 65 ವರ್ಷದ ಗುರ್ನಾಮ್ ಸಿಂಗ್ ಎಂಬ ವೃದ್ಧರ ಮೇಲೆ ಹಲ್ಲೆ ನಡೆಸಿದ್ದರು. ತೀವ್ರವಾಗಿ ಗಾಯಗೊಂಡ ಆ ವೃದ್ಧ ಕೆಲ ದಿನಗಳ ನಂತರ ಮೃತಪಟ್ಟಿದ್ದರು. ನ್ಯಾಯಾಲಯದಲ್ಲಿ 10 ವರ್ಷಗಳ ವಿಚಾರಣೆ ನಡೆದು ಸಾಕ್ಷಾಧಾರಗಳ ಕೊರತೆಯಿಂದ 1999ರಲ್ಲಿ ಸಿಧು ಅವರನ್ನು ಖುಲಾಸೆಗೊಳಿಸಲಾಗಿತ್ತು. ಮೃತ ವ್ಯಕ್ತಿಯ ಕುಟುಂಬ ಸುಪ್ರಿಂ ಕೋರ್ಟ್ ನಲ್ಲಿ ಮತ್ತೇ ಅರ್ಜಿ ಸಲ್ಲಿಸಿದೆ. ಒಂದು ವೇಳೆ ಪ್ರಕರಣಕ್ಕೆ ಶಿಕ್ಷೆ ವಿಧಿಸಿದರೆ ಸಿಧು ಅವರು 3 ವರ್ಷಗಳ ಕಾಲ ಸೆರೆವಾಸ ಅನುಭವಿಸಬೇಕಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.