
ಕಲ್ಯಾಣ್(ಅ.15): ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಮಹಾರಾಷ್ಟ್ರದಲ್ಲಿ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿಯೇ ಇದೆ. ಮತ್ತೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿರುವ ಆಡಳಿತಾರೂಢ ಮೈತ್ರಿಕೂಟಕ್ಕೆ ಶಾಕ್ ಕೊಡಲು ಪ್ರತಿಪಕ್ಷಗಳೂ ಸಜ್ಜಾಗಿವೆ.
ಅದರಂತೆ ಮಹಾರಾಷ್ಟ್ರದ ಕಲ್ಯಾಣ್ನಲ್ಲಿ ಮಾತನಾಡಿದ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸದುದ್ದೀನ್ ಒವೈಸಿ, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವ ಬಿಜೆಪಿ ಹಾಗೂ ಶಿವಸೇನೆ ಹುನ್ನಾರವನ್ನು ವಿಫಲಗೊಳಿಸುವುದಾಗಿ ಗುಡುಗಿದ್ದಾರೆ.
ಭಾರತ ಜಾತ್ಯಾತೀತ ರಾಷ್ಟ್ರವಾಗಿದ್ದು ಇಲ್ಲ ಸರ್ವ ಧರ್ಮಗಳೂ ಸಮಾನ ಸ್ಥಾನ ಪಡೆದಿವೆ ಎಂದಿರುವ ಒವೈಸಿ, ಈ ಜಾತ್ಯಾತೀತ ಸ್ವರೂಪದ ಮೇಲೆ ದಾಳಿ ಮಾಡುತ್ತಿರುವ ಬಿಜೆಪಿ-ಶಿವಸೇನೆ ಮೈತ್ರಿಕೂಟವನ್ನು ಸೋಲಿಸುವಂತೆ ಜನತೆಗೆ ಕರೆ ನೀಡಿದರು.
ವೈವಿಧ್ಯತೆಯಿಂದ ಕೂಡಿರುವ ಭಾರತವನ್ನು ಏಕ ಸಂಸ್ಕೃತಿಯ ಗೂಡನ್ನಾಗಿ ಪರಿವರ್ತಿಸುವ ಬಿಜೆಪಿ-ಶಿವಸೇನೆ ಪ್ರಯತ್ನ ಎಂದಿಗೂ ಫಲಿಸದು ಎಂದಿರುವ ಒವೈಸಿ, ತಮ್ಮ ಕೊನೆಯ ಉಸಿರಿರುವವರೆಗೂ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡುವುದಾಗಿ ಭರವಸೆ ನೀಡಿದರು.
ಶಿವಸೇನೆಗೆ ಹಸಿರು ಬಣ್ಣ ಕಂಡರೆ ಆಗುವುದಿಲ್ಲ. ಹಸಿರು ಬಣ್ಣ ಅಲ್ಪಸಂಖ್ಯಾತರದ್ದು ಎಂಬ ಭಾವನೆ ಅದರಲ್ಲಿದೆ. ಆದರೆ ಹಸಿರುವ ಬಣ್ಣ ಭಾರತದ ರಾಷ್ಟ್ರಧ್ವಜದಲ್ಲೂ ಇರುವ ಸತ್ಯ ಶಿವಸೇನೆಗೆ ಗೊತ್ತಿಲ್ಲ ಎಂದು ಒವೈಸಿ ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.