‘ನಾವು ದಿಡ್ಡಳ್ಳಿ ಬಿಟ್ಟು ಹೋಗಲ್ಲ’

Published : Feb 16, 2017, 05:05 AM ISTUpdated : Apr 11, 2018, 12:50 PM IST
‘ನಾವು ದಿಡ್ಡಳ್ಳಿ ಬಿಟ್ಟು ಹೋಗಲ್ಲ’

ಸಾರಾಂಶ

ನಿಗದಿ ಪಡಿಸಿದ ಸ್ಥಳದಲ್ಲಿ, ಮನೆಯನ್ನೂ ನಿರ್ಮಾಣ ಮಾಡಿಕೊಟ್ಟು, ಗುಡಿಕೈಗಾರಿಕೆಗೂ ಅವಕಾಶ ನೀಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ ದಿಡ್ಡಳ್ಳಿಯ ನಿವಾಸಿಗಳು ಮಾತ್ರ ಯಾವುದೇ ಕಾರಣಕ್ಕೂ ತಾವು ದಿಡ್ಡಳ್ಳಿ ತೊರೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಮಡಿಕೇರಿ (ಫೆ.16): ದಿನದಿಂದ ದಿನಕ್ಕೆ ದಿಡ್ಡಳ್ಳಿಯಲ್ಲಿ ಹೋರಾಟಗಳು ಹೆಚ್ಚಾಗುತ್ತಾ ಬರುತ್ತಿದ್ದಂತೆ, ಕೊಡಗು ಜಿಲ್ಲಾಡಳಿತ ತನ್ನದೇ ದಾರಿಯಲ್ಲಿ ಸಾಗುತ್ತಿದೆ.

ಕಳೆದ ಬಾರಿ ದಿಡ್ಡಳ್ಳಿಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್ ಸೀತಾರಾಮ್, ಅಧಿಕೃತ ದಾಖಲೆ ಹೊಂದಿರುವ 528 ಕುಟುಂಬಗಳಿಗೆ ನಿವೇಶನ ನೀಡುವುದಾಗಿ ಹೇಳಿದ್ದರು. ಅದರಂತೆ ಪ್ರತೀ ಕುಟುಂಬಕ್ಕೆ 30/30 ಅಳತೆಯಲ್ಲಿ ನಿವೇಶನಗಳನ್ನು ನಿಗದಿ ಪಡಿಸಿದ್ದು,  ವಿರಾಜಪೇಟೆ ತಾಲೂಕಿನ ಕೆದಮಳ್ಳೂರಿನಲ್ಲಿ 176 ನಿವೇಶನ, ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿಯಲ್ಲಿ 181 ಮತ್ತು ರಾಂಪುರದಲ್ಲಿ 171 ನಿವೇಶನಗಳನ್ನು ಗುರುತಿಸಿ ಲಾಟರಿ ಮೂಲಕ ಹಕ್ಕು ಪತ್ರ ನೀಡಲು ಮುಂದಾಗಿದೆ.

ಅಷ್ಟೆ ಅಲ್ಲದೇ ನಿಗದಿ ಪಡಿಸಿದ ಸ್ಥಳದಲ್ಲಿ, ಮನೆಯನ್ನೂ ನಿರ್ಮಾಣ ಮಾಡಿಕೊಟ್ಟು, ಗುಡಿಕೈಗಾರಿಕೆಗೂ ಅವಕಾಶ ನೀಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ ದಿಡ್ಡಳ್ಳಿಯ ನಿವಾಸಿಗಳು ಮಾತ್ರ ಯಾವುದೇ ಕಾರಣಕ್ಕೂ ತಾವು ದಿಡ್ಡಳ್ಳಿ ತೊರೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ
ಅಪ್ರಾಪ್ತರಿಂದ 8ನೇ ಕ್ಲಾಸ್ ಬಾಲಕಿಗೆ ಕಿರುಕುಳ: ನಾಲ್ವರು ಬಾಲಕರ ತಾಯಂದಿರನ್ನು ಬಂಧಿಸಿದ ಪೊಲೀಸರು