ರಾಮಸೇತುವಿಗೆ ಯಾವುದೇ ಹಾನಿಯುಂಟು ಮಾಡುವುದಿಲ್ಲ : ಕೇಂದ್ರ

Published : Mar 16, 2018, 02:32 PM ISTUpdated : Apr 11, 2018, 12:55 PM IST
ರಾಮಸೇತುವಿಗೆ ಯಾವುದೇ ಹಾನಿಯುಂಟು ಮಾಡುವುದಿಲ್ಲ : ಕೇಂದ್ರ

ಸಾರಾಂಶ

ರಾಷ್ಟ್ರದ ಹಿತಾಸಕ್ತಿಯ ನಿಟ್ಟಿನಲ್ಲಿ ನಾವು ರಾಮಸೇತುವನ್ನು ಮುಟ್ಟುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್’ಗೆ ಹೇಳಿದೆ.

ನವದೆಹಲಿ : ರಾಷ್ಟ್ರದ ಹಿತಾಸಕ್ತಿಯ ನಿಟ್ಟಿನಲ್ಲಿ ನಾವು ರಾಮಸೇತುವನ್ನು ಮುಟ್ಟುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್’ಗೆ ಹೇಳಿದೆ.

ಅದರ ಬದಲಾಗಿ ಬೇರೆ ಮಾರ್ಗವನ್ನು ಹುಡುಕಿಕೊಳ್ಳಲಾಗುವುದು ಎಂದು ತಿಳಿಸಿದೆ.  ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದು, ಇದಕ್ಕೆ ಉತ್ತರ ನೀಡಿದ ಕೇಂದ್ರ ಸರ್ಕಾರ ಸೇತು ಸಮುದ್ರಮ್ ಯೋಜನೆಯಿಂದ ಯಾವುದೇ ರೀತಿಯಾದ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿದೆ.

ಭಾರತ ಸರ್ಕಾರ  ಹಿಂದೆಯೂ ಕೂಡ ಸೇತು ಸಮುದ್ರಮ್ ಶಿಪ್ ಪ್ರಾಜೆಕ್ಟ್’ನಿಂದ ಯಾವುದೇ ರೀತಿಯಾದ ಸಮಸ್ಯೆ ಉಂಟಾಗದಂತೆ ಬದಲಿ ಮಾರ್ಗವನ್ನು ಕಂಡುಕೊಳ್ಳುವುದಾಗಿ ಹೇಳಿತ್ತು. ಇದು ದೇಶದ ಹಿತದೃಷ್ಟಿಯಿಂದ ಕೈಗೊಳ್ಳುವ ಕ್ರಮವಾಗಿದೆ ಎಂದು ಸುಪ್ರೀಂಕೋರ್ಟ್’ಗೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು