
ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮನ ಹೆಸರು ನಾಮಕರಣ ಮಾಡುವ ಸಂಬಂಧ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದರೆ ಕೇಂದ್ರ ಸರ್ಕಾರ ಅನುಮೋದನೆ ನೀಡಲಿದೆ ಎಂದು ವಿಮಾನಯಾನ ಸಚಿವ ಅಶೋಕ ಗಜಪತಿರಾಜು ಹೇಳಿದರು.
ಮೇಲ್ದರ್ಜೆಗೇರಿದ ಬೆಳಗಾವಿ ವಿಮಾನ ನಿಲ್ದಾಣವನ್ನು ಗುರುವಾರ ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿ, ಚೆನ್ನಮ್ಮನ ಹೆಸರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮನ ಹೆಸರು ನಾಮಕರಣ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಈ ಮೂಲಕ ವೀರರಾಣಿ ಚೆನ್ನಮ್ಮಳ ಇತಿಹಾಸವನ್ನು ನಮ್ಮ ಮುಂದಿನ ಪೀಳಿಗೆಗೆ ಪರಿಚಯ ಮಾಡಿಕೊಟ್ಟಂತಾಗಲಿದೆ ಎಂದು ಹೇಳಿದರು.
ಪ್ರತಿ 150 ಕಿ.ಮೀ.ಗೆ ಏರ್ಪೋರ್ಟ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಪ್ರತಿ 150 ಕಿ.ಮೀ. ಅಂತರದಲ್ಲಿ ಸಣ್ಣ ವಿಮಾನ ನಿಲ್ದಾಣ ಸ್ಥಾಪಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ.
ಶಿವಮೊಗ್ಗ, ವಿಜಯಪುರ, ಹಾಸನ ಹಾಗೂ ಕಲಬುರಗಿಗಳಲ್ಲಿ ಈ ರೀತಿಯ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದೆ. ರಸ್ತೆ, ರೈಲು ಹಾಗೂ ವಿಮಾನ ಸಂಪರ್ಕ ಅಭಿವೃದ್ಧಿಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಕೇಂದ್ರಕ್ಕೆ ಭರವಸೆ ನೀಡಿದರು.
ದಕ್ಷಿಣ ಭಾರತದಲ್ಲೇ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ವಿಮಾನಯಾನ ಮಾಡುತ್ತಾರೆ. 2016-17ನೇ ಸಾಲಿನಲ್ಲಿ 98,575 ಪ್ರಯಾಣಿಕರು ವಿಮಾನ ಪ್ರಯಾಣ ಮಾಡಿದ್ದಾರೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.