ಪಕ್ಷ ಅಧಿಕಾರಕ್ಕೆ ಬಂದರೆ ಯುಪಿ ರೀತಿ ಎನ್ಕೌಂಟರ್‌: ಬಿಜೆಪಿ ಶಾಸಕಿ ಆಫರ್‌!

Published : Dec 16, 2018, 08:31 AM IST
ಪಕ್ಷ ಅಧಿಕಾರಕ್ಕೆ ಬಂದರೆ ಯುಪಿ ರೀತಿ ಎನ್ಕೌಂಟರ್‌: ಬಿಜೆಪಿ ಶಾಸಕಿ ಆಫರ್‌!

ಸಾರಾಂಶ

ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದರೆ, ಉತ್ತರಪ್ರದೇಶದ ಮಾದರಿಯಲ್ಲಿ ಎನ್‌ಕೌಂಟರ್‌ ನಡೆಸಲಾಗುವುದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರಾಜಕುಮಾರಿ ಕೇಸರಿ ಆಫರ್‌ ನೀಡಿದ್ದಾರೆ

ಕೋಲ್ಕತಾ[ಡಿ.16]: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದರೆ, ಉತ್ತರಪ್ರದೇಶದ ಮಾದರಿಯಲ್ಲಿ ಎನ್‌ಕೌಂಟರ್‌ ನಡೆಸಲಾಗುವುದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರಾಜಕುಮಾರಿ ಕೇಸರಿ ಆಫರ್‌ ನೀಡಿದ್ದಾರೆ.

ಬುದ್ರ್ವಾನ್‌ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಸರಿ, ರಾಜ್ಯದಲ್ಲಿ ಟಿಎಂಸಿ ಅಧಿಕಾರಕ್ಕೆ ಬಂದ ಬಳಿಕ ಗೂಂಡಾಗಳ ಹಾವಳಿ ಹೆಚ್ಚಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಸರ್ಕಾರ, ಎನ್‌ಕೌಂಟರ್‌ ನಡೆಸಿ ಗೂಂಡಾಗಳಿಗೆ ಪಾಠ ಕಲಿಸಿದಂತೆ ಪಾಠ ಕಲಿಸಲಾಗುವುದು. ಈಗಾಗಲೇ ಎನ್‌ಕೌಂಟರ್‌ ಮಾಡಬೇಕಾದ ವ್ಯಕ್ತಿಗಳ ಪಟ್ಟಿತಯಾರಿಸುವಂತೆ ಕೇಂದ್ರ ನಾಯಕರು, ರಾಜ್ಯ ನಾಯಕರುಗಳಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಕೇಸರಿ ಅವರ ಹೇಳಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್‌ ಘೋಷ್‌ ಕೂಡಾ ಸಮರ್ಥಿಸಿಕೊಂಡಿದ್ದಾರೆ. ಗೂಂಡಾಗಳನ್ನು ಗಂಗಾಜಲದ ಮೂಲಕ ಶುದ್ದೀಕರಿಸಲು ಸಾಧ್ಯವಿಲ್ಲ. ಗೂಂಡಾಗಳಿಗೆ ಅವರದ್ದೇ ರೀತಿ ಪಾಠ ಕಲಿಸಬೇಕು ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು