
ಬೆಂಗಳೂರು (ಸೆ.30): ಕಾವೇರಿ ವಿಚಾರದಲ್ಲಿ ಕರ್ನಾಟಕದ ವಾದಕ್ಕೆ ಮನ್ನಣೆ ನೀಡದ ಸುಪ್ರೀಂಕೋರ್ಟ್ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶಿಸಿದೆ. ಕರ್ನಾಟಕ್ಕೆ ಮತ್ತೊಮ್ಮೆ ಹಿನ್ನೆಡೆಯಾಗಿದೆ.
ಸಂವಿಧಾನದ ಪರಿಚ್ಚೇದ 143 ರ ಅಡಿಯಲ್ಲಿ ರಾಷ್ಟ್ರಪತಿಯವರಿಗೆ ಮಧ್ಯಪ್ರವೇಶಿಸಲು ವಿಶೇಷ ಅಧಿಕಾರವಿದೆ. ಸುಪ್ರೀಂ ಆದೇಶಗಳ ಬಗ್ಗೆ ಆಕ್ಷೇಪ ಎತ್ತಿ ದೂರು ನೀಡಿದರೆ ರಾಷ್ಟ್ರಪತಿಯವರು ಮಧ್ಯಪ್ರವೇಶಿಸಬಹುದು.
ಆಗ ಪ್ರಕರಣದ ಗಂಭೀರತೆ ಆಧಾರದ ಮೇಲೆ ಅದನ್ನು ಪರಿಶೀಲಿಸುವಂತೆ ರಾಷ್ಟ್ರಪತಿಯವರು ಸುಪ್ರೀಂಗೆ ಸಲಹೆ ನೀಡಬಹುದು. ಆಗ ನ್ಯಾಯಾಲಯ ಮರುಪರಿಶೀಲಿಸಿ ಅಭಿಪ್ರಾಯವನ್ನು ರಾಷ್ಟ್ರಪತಿಯವರಿಗೆ ತಿಳಿಸಬೇಕಾಗುತ್ತದೆ. ಆಗ ಅಭಿಪ್ರಾಯ ಆಧರಿಸಿ ಅವರು ಮುಂದಿನ ನಿರ್ಧಾರ ಕೈಗೊಳ್ಳಬಹುದು.
ಕಾವೇರಿ ವಿಚಾರದಲ್ಲಿ ರಾಷ್ಟ್ರಪತಿ ನೆರವು ನೀಡುತ್ತಾರಾ ಎನ್ನುವುದು ಮುಂದಿನ ಪ್ರಶ್ನೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.