ಕಾಂಗ್ರೆಸ್ ಸಂಪರ್ಕದಲ್ಲಿ ಬಿಜೆಪಿಗರು : ಬೇಳೂರು ಬಾಂಬ್

Published : Jul 05, 2019, 01:56 PM ISTUpdated : Jul 05, 2019, 01:57 PM IST
ಕಾಂಗ್ರೆಸ್ ಸಂಪರ್ಕದಲ್ಲಿ ಬಿಜೆಪಿಗರು : ಬೇಳೂರು ಬಾಂಬ್

ಸಾರಾಂಶ

ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರಾಜಕೀಯ ನಿವೃತ್ತಿ ಸವಾಲು ಹಾಕಿದ್ದಾರೆ. ಅಲ್ಲದೇ ಇದೇ ವೇಳೆ ಹೊಸ ಬಾಂಬ್ ಸಿಡಿಸಿದ್ದಾರೆ. 

ಶಿವಮೊಗ್ಗ [ಜು.05] : ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು ಈಗಾಗಲೇ ರಾಜ್ಯದಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಬಿಜೆಪಿಗರು ರಾಜಕೀಯ ಅಸ್ಥಿರ ಮಾಡಲು ಹೊರಟಿದ್ದಾರೆ ಎಂದು ಆರೋಪ ಮಾಡಿದರು. 

ಪುತ್ತೂರು ಗ್ಯಾಂಗ್ ರೇಪ್: 'ಶೋಭಾ ಕರಂದ್ಲಾಜೆ ಈಗ ಬಾಯಿ ಬಡ್ಕೊಳ್ಳಲ್ಲ ಯಾಕೆ?'

ಯಾವುದೇ ಕಾರಣಕ್ಕೂ ಬಿಜೆಪಿ ನಾಯಕ ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿ ಆಗುವುದಿಲ್ಲ. ನಾನು ನನ್ನ ಮನೆ ದೇವರ ಮೇಲೆ ಹರಕೆ ಹಾಕಿದ್ದೇನೆ ಎಂದು ಬೇಳೂರು ಹೇಳಿದರು.

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮನಸ್ಸು ಮಾಡಿದರೆ ಆಪರೇಷನ್ ಕಾಂಗ್ರೆಸ್ ಮಾಡಬಹುದು. ಅವರ ಸಂಪರ್ಕದಲ್ಲಿ ಕೆಲವು ಬಿಜೆಪಿ ಶಾಸಕರಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲೋಕಾಯುಕ್ತ ದಾಳಿ: ₹50 ಸಾವಿರ ಹಣ ಟಾಯ್ಲಟ್ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ ಕೃಷಿ ಅಧಿಕಾರಿ!
ಒಜಿ ನಿರ್ದೇಶಕನಿಗೆ 3 ಕೋಟಿ ರೂ ಕಾರು ಗಿಫ್ಟ್ ಕೊಟ್ಟ ಪವನ್ ಕಲ್ಯಾಣ್, ಭಾವುಕರಾದ್ ಸುಜೀತ್