
ಬೆಂಗಳೂರು(ಜು. 06) ಅತೃಪ್ತ ಶಾಸಕರ ರಾಜೀನಾಮೆಯಿಂದ ಕರ್ನಾಟಕದ ದೋಸ್ತಿ ಸರಕಾರ ಅಲ್ಪ ಮತಕ್ಕೆ ಕುಸಿಯುವ ಸಂಕಟದಲ್ಲಿರುವಾಗ ಅದರಿಂದ ಪಾರಾಗಲು ಹೊಸ ತಂತ್ರದ ಮೊರೆ ಹೋಗಿದೆ ಎಂಬ ಮಾತು ಕೇಳಿ ಬಂದಿದೆ.
ಹಾಗಾದರೆ ಏನಿದು ಹೊಸ ತಂತ್ರ. ಈಗ ರಾಜೀನಾಮೆ ಕೊಟ್ಟಿರುವ ಪಟ್ಟಿಯಲ್ಲಿರುವ ಅನೇಕ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗರು. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಮತ್ತೆ ಮತ್ತೆ ಹೇಳಿಕೊಂಡು ಬಂದವರು. ಹಾಗಾದರೆ ಇದೇ ಕಾರಣಕ್ಕೆ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಿ ಈ ಅತೃಪ್ತ ಶಾಸಕರ ಮನೊಲಿಸಬಹುದೆ? ಎಂಬ ಚರ್ಚೆ ಆರಂಭವಾಗಿದೆ.
ಶಾಸಕರ ಸಾಮೂಹಿಕ ರಾಜೀನಾಮೆ..ಕರ್ನಾಟಕದಲ್ಲಿ ಏನಾಗ್ತಾಇದೆ?
ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಬೇರೆ ಆಯ್ಕೆಗಳು ಉಳಿದುಕೊಂಡಂತೆ ಕಾಣುತ್ತಿಲ್ಲ. ಹೇಗಾದರೂ ಮಾಡಿ ಶಾಸಕರ ಮನವೊಲಿಸಿದರೆ ಮಾತ್ರವೇ ಸರ್ಕಾರ ಸೇಫ್ ಮಾಡಿಕೊಳ್ಳಬಹುದು. ಶನಿವಾರ ಸಂಜೆ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಲಿದ್ದು ಹಿರಿಯ ನಾಯಕರ ಸಭೆ ನಂತರ ಸ್ಪಷ್ಟ ಚಿತ್ರಣ ಗೊತ್ತಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.