
ನವದೆಹಲಿ (ಡಿ.27): ದೇಶದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಕಟಣೆಗಳನ್ನು ಮೊದಲು ಆಯಾ ಸ್ಥಳೀಯ ಭಾಷೆ, ಬಳಿಕ ಹಿಂದಿ ಹಾಗೂ ಇಂಗ್ಲಿಷ್ನಲ್ಲಿ ಹೇಳುವಂತೆ ಕೇಂದ್ರ ಸರ್ಕಾರ ಎಲ್ಲ ಏರ್ಪೋರ್ಟ್ಗಳಿಗೆ ಸೂಚನೆ ನೀಡಿದೆ. ಇದರಿಂದಾಗಿ ಕರ್ನಾಟಕದ ವಿಮಾನ ನಿಲ್ದಾಣಗಳಲ್ಲಿ ಕನ್ನಡದಲ್ಲೇ ಉದ್ಘೋಷ ಮೊಳಗಲಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ)ದ ನಿಯಂತ್ರಣದಲ್ಲಿರುವ ಏರ್ಪೋರ್ಟ್ಗಳು ಹಾಗೂ ಖಾಸಗಿ ವಿಮಾನ ನಿಲ್ದಾಣಗಳಿಗೆ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರು ಈ ಸಂಬಂಧ ಬುಧವಾರ ನಿರ್ದೇಶನ ನೀಡಿದ್ದಾರೆ. ಯಾವುದೇ ಘೋಷಣೆಗಳನ್ನೂ ಮಾಡದೇ ‘ನಿಶ್ಶಬ್ದ’ (ಸೈಲೆಂಟ್) ಆಗಿರುವ ವಿಮಾನ ನಿಲ್ದಾಣಗಳಿಗೆ ಈ ನಿರ್ದೇಶನ ಅನ್ವಯವಾಗುವುದಿಲ್ಲ.
ವಿಮಾನ ನಿಲ್ದಾಣಗಳಲ್ಲಿ ಸಾಮಾನ್ಯವಾಗಿ ಹಿಂದಿ ಹಾಗೂ ಇಂಗ್ಲಿಷ್ನಲ್ಲೇ ಪ್ರಕಟಣೆ ಹೊರಡಿಸುವುದರಿಂದ ಆ ಭಾಷೆ ಗೊತ್ತಿಲ್ಲದ ಸ್ಥಳೀಯ ಭಾಷಿಕರಿಗೆ ಸಮಸ್ಯೆ ಆಗುತ್ತಿತ್ತು. ಈಗಾಗಲೇ ರೈಲ್ವೆಯಲ್ಲಿ ಸ್ಥಳೀಯ ಭಾಷೆ, ಹಿಂದಿ ಹಾಗೂ ಇಂಗ್ಲಿಷ್ ಅನ್ನು ಬಳಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.