ಮಲ್ಲಿಕಾರ್ಜುನ್ ಖರ್ಗೆ ಸಲಹೆ ಪಡೆಯುವೆ : ಬಿಜೆಪಿ ಸಂಸದ ಜಾಧವ್

Published : Jun 02, 2019, 12:59 PM IST
ಮಲ್ಲಿಕಾರ್ಜುನ್ ಖರ್ಗೆ ಸಲಹೆ ಪಡೆಯುವೆ : ಬಿಜೆಪಿ ಸಂಸದ ಜಾಧವ್

ಸಾರಾಂಶ

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಲಹೆ ಪಡೆಯುವುದಾಗಿ ಕಲಬುರಗಿ ಬಿಜೆಪಿ ಸಂಸದ ಉಮೇಶ್ ಜಾಧವ್ ಹೇಳಿದ್ದಾರೆ.

ಕಲಬುರಗಿ :  ಜಿಲ್ಲೆಯ ಅಭಿವೃದ್ಧಿಗಾಗಿ ಮಲ್ಲಿಕಾರ್ಜುನ್ ಖರ್ಗೆ ಅವರ ಸಲಹೆ ಪಡೆಯುವುದಾಗಿ ನೂತನ ಸಂಸದ ಉಮೇಶ್ ಜಾಧವ್ ಹೇಳಿದ್ದಾರೆ. 

ಕಲಬುರಗಿಯಲ್ಲಿ ಮಾತನಾಡಿದ ಜಾಧವ್, ಖರ್ಗೆ ಹಿರಿಯ ರಾಜಕಾರಣಿ, ಅವರ ಸಲಹೆ ಪಡೆದುಕೊಂಡು ನೆನೆಗುದಿಗೆ ಬಿದ್ದ ಯೋಜನೆಗಳನ್ನು ಪೂರ್ಣಗೊಳಿಸುತ್ತೇವೆ ಎಂದರು.

ಮಲ್ಲಿಕಾರ್ಜುನ್ ಖರ್ಗೆ ಅವಧಿಯಲ್ಲಿ ಅನೇಕ ಯೋಜನೆಗಳು ಅಪೂರ್ಣವಾಗಿವೆ. ಈ ಅವಧಿಯಲ್ಲಿ ತಾವು ಸಂಸದರಾಗಿದ್ದೇವೆ ಎಂದು ಸೊಕ್ಕಿನಿಂದ ತಿರುಗಾಡುವುದಿಲ್ಲ. ಜಿಲ್ಲೆಯ ಎಲ್ಲರನ್ನೂ ಜೊತೆಗೂಡಿಸಿಕೊಂಡು ಕೆಲಸ ಮಾಡುತ್ತೇನೆ ಎಂದರು.

ಸದ್ಯ ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇರುವ ಸಮೀಶ್ರ ಸರ್ಕಾರ ಏನಾಗುತ್ತದೆ ಎನ್ನುವುದರ ಬಗ್ಗೆ ನನಗೆ ತಿಳಿದಿಲ್ಲ. ಆದರೆ ನನಗೆ ಜನರು ವಹಿಸಿದ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ ನಿಭಾಯಿಸುತ್ತೇನೆ ಎಂದರು.

ಈ ಹಿಂದೆ ಕಾಂಗ್ರೆಸ್ ನಲ್ಲಿದ್ದ ಉಮೇಶ್ ಜಾಧವ್ ಶಾಸಕ ಸ್ಥಾನವನ್ನು ತ್ಯಜಿಸಿ ಬಿಜೆಪಿ ಕೈ ಹಿಡಿದಿದ್ದರು. ಬಳಿಕ ಕಲಬುರಗಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆದುಕೊಂಡು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!