ಜಾಮದಾರ್ ಇಟ್ಟ ಮೂರು ಷರತ್ತಿಗೆ ಒಪ್ಪಿಕೊಳ್ಳುತ್ತಾ ವೀರಶೈವ ಮಹಾಸಭಾ?

Published : Jun 10, 2018, 01:05 PM ISTUpdated : Jun 10, 2018, 05:28 PM IST
ಜಾಮದಾರ್ ಇಟ್ಟ ಮೂರು ಷರತ್ತಿಗೆ ಒಪ್ಪಿಕೊಳ್ಳುತ್ತಾ ವೀರಶೈವ ಮಹಾಸಭಾ?

ಸಾರಾಂಶ

ಒಂದಾಗ್ತಾರಾ ವೀರಶೈವ, ಲಿಂಗಾಯತರು..? ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟಕ್ಕೆ ಬ್ರೇಕ್​..? ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟಗಾರ ಎಸ್.ಎಂ. ಜಾಮದಾರ್ ಹೇಳಿದ್ದೇನು? ‘ವೀರಶೈವ, ಲಿಂಗಾಯತ ಮಹಾಸಭಾ ಒಗ್ಗೂಡಲು ಸಿದ್ಧ’ ‘ವೀರಶೈವ ಮಹಾಸಭಾ ತನ್ನ ನಿಲುವು ಬದಲಿಸಿದರೆ ಒಂದಾಗಲು ಸಿದ್ಧ’ ‘ಸಚಿವ ಸ್ಥಾನ ಹಂಚಿಕೆಯಲ್ಲಿ ವೀರಶೈವ, ಲಿಂಗಾಯತರಿಗೆ ಅನ್ಯಾಯ ಮಾಡಲಾಗಿದೆ’ ಒಗ್ಗಟ್ಟು ಪ್ರದರ್ಶಿಸಿ ರಾಜಕೀಯ ಪ್ರಾತಿನಿಧ್ಯ ಪಡೆಯಲು ತೀರ್ಮಾನ

ಬೆಂಗಳೂರು(ಜೂ.10): ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ಸದ್ಯಕ್ಕೆ ಬ್ರೇಕ್ ಬೀಳುವ ಲಕ್ಷಣ ಗೋಚರವಾಗುತ್ತಿದೆ. ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಕೆಲವು ಷರತ್ತುಗಳೊಂದಿಗೆ ಹೋರಾಟವನ್ನು ನಿಲ್ಲಿಸುವ ಸೂಚನೆಯನ್ನು ಹೋರಾಟಗಾರರು ನೀಡಿದ್ದಾರೆ.  

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟಗಾರ ಎಸ್.ಎಂ. ಜಾಮದಾರ್, ವೀರಶೈವ ಮತ್ತು ಲಿಂಗಾಯತ ಮಹಾಸಭಾ ಒಗ್ಗೂಡಲು ಸಿದ್ದ ಎಂದು ಹೇಳಿದ್ದಾರೆ. ವೀರಶೈವ ಮಹಾಸಭಾ ತನ್ನ ನಿಲುವು ಬದಲಿಸಿದರೆ ಒಂದಾಗಲು ಸಿದ್ಧ ಎಂದಿರುವ ಅವರು, ಈಗಿರುವ ಅಖಿಲ ಭಾರತ ವೀರಶೈವ ಮಹಾಸಭಾ ಹೆಸರು ಬದಲಿಸಿ ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾ ಎಂದು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

"

ತಮ್ಮ ಬೇಡಿಕೆಯನ್ನು ಒಪ್ಪಿದರೆ ಒಗ್ಗಟ್ಟಿನಿಂದ ರಾಜಕೀಯ, ಧಾರ್ಮಿಕ ವಿಚಾರಗಳಿಗೆ ಒಂದಾಗಿ ಹೋರಾಡುತ್ತೇವೆ ಎಂದು ಜಾಮದಾರ್ ಹೇಳಿದ್ದಾರೆ. ಪ್ರಸ್ತುತ ರಾಜ್ಯ ಸರ್ಕಾರದಲ್ಲಿ  ಸಚಿವ ಸ್ಥಾನ ಹಂಚಿಕೆಯಲ್ಲಿ ವೀರಶೈವ, ಲಿಂಗಾಯತರಿಗೆ ಅನ್ಯಾಯ ಮಾಡಲಾಗಿದ್ದು, ಒಗ್ಗಟ್ಟು ಪ್ರದರ್ಶಿಸಿ ರಾಜಕೀಯ ಪ್ರಾತಿನಿಧ್ಯ ಪಡೆಯಲು ತೀರ್ಮಾನಿಸಿರುವುದಾಗಿ ಅವರು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಗರ್ಭ ಶ್ರೀಮಂತನೆಂದು ಎಂಜಿನಿಯರ್‌ನನ್ನ ಮದುವೆಯಾದಳು... ಫಸ್ಟ್‌ ನೈಟ್‌ನಲ್ಲೇ ಬಯಲಾಯ್ತು ಕರಾಳ ಸತ್ಯ!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!