ಮೋದಿಗೆ ಅಪ್ಪುಗೆ : ಪ್ರೀತಿಯಿಂದ ಗೆಲ್ಲಬೇಕೆ ಹೊರತು ಧ್ವೇಷದಿಂದಲ್ಲ

Published : Jul 22, 2018, 03:17 PM IST
ಮೋದಿಗೆ ಅಪ್ಪುಗೆ : ಪ್ರೀತಿಯಿಂದ ಗೆಲ್ಲಬೇಕೆ ಹೊರತು ಧ್ವೇಷದಿಂದಲ್ಲ

ಸಾರಾಂಶ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಪ್ಪಿಕೊಂಡಿದ್ದು ಬಹಳಷ್ಟು ಸುದ್ದಿಯಾಗಿದ್ದು ಅನೇಕರು ಟೀಕೆ ಮಾಡಿದ್ದರು. ಈ ಸಂಬಂಧ ಇದೀಗ ಪ್ರತಿಕ್ರಿಯೆ ನೀಡಿರುವ ರಾಹುಲ್ ಪ್ರೀತಿಯಿಂದ ಗೆಲ್ಲಬೇಕೆ ವಿನಃ ಧ್ವೇಷದಿಂದಲ್ಲ ಎಂದು ಹೇಳಿದ್ದಾರೆ. 

ನವದೆಹಲಿ: ಜನರ ಪ್ರೀತಿ ಮತ್ತು ಸಹಾನುಭೂತಿ ಯಿಂದ ಮಾತ್ರ ದೇಶ ಕಟ್ಟಲು ಸಾಧ್ಯ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಲೋಕಸಭೆಯಲ್ಲಿ ಶುಕ್ರವಾರ ಅವಿಶ್ವಾಸ ಗೊತ್ತುವಳಿ ಚರ್ಚೆಯಲ್ಲಿ,  ಭಾಷಣ ಮಾಡಿ, ಪ್ರಧಾನಿ ಮೋದಿಗೆ ಅಪ್ಪುಗೆ ನೀಡಿದ್ದ  ರಾಹುಲ್ ಶನಿವಾರ ಈ  ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

‘ಸಂಸತ್ತಿನಲ್ಲಿ ಪ್ರಧಾನಿ ಯವರು ತಮ್ಮನ್ನು ನಿರೂಪಿಸಿ ಕೊಳ್ಳಲು ಕೆಲವು ಜನರಲ್ಲಿ ದ್ವೇಷ, ಭಯ ಮತ್ತು ಆಕ್ರೋಶದ ಭಾವನೆಯನ್ನು ಬಿತ್ತಿದ್ದಾರೆ. ಆದರೆ, ಭಾರತೀಯರ ಪ್ರೀತಿ ಮತ್ತು ಸಹಾನುಭೂತಿಯಿಂದ ಮಾತ್ರ ದೇಶ ಕಟ್ಟಲು ಸಾಧ್ಯ ಎಂಬುದನ್ನು ಸಾಬೀತು ಪಡಿಸಲಿದ್ದೇವೆ’ ಎಂದು ಟ್ವೀಟ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಳುತ್ತಲೇ ತನ್ನ 11 ವರ್ಷಗಳ ಅಂತರ್ಜಾತಿ ಪ್ರೀತಿಯ ಹೇಳಿಕೊಂಡ ಮಗಳಿಗೆ ತಂದೆ ಹೇಳಿದ್ದೇನು? : ವೀಡಿಯೋ
ಗೃಹಲಕ್ಷ್ಮಿ ಹಣ ಬಾಕಿ ಗದ್ದಲ: ತಪ್ಪೊಪ್ಪಿಕೊಂಡ ಸಚಿವೆ, ವಿಪಕ್ಷಗಳು ಆಕ್ರೋಶ, ಪ್ರಿಯಾಂಕ್ ಖರ್ಗೆಗೆ ಸ್ಫೀಕರ್ ತರಾಟೆ!