
ಬೆಳಗಾವಿ (ನ.22): ಎರಡನೇ ದಿನವೂ ವಿಧಾನ ಮಂಡಲ ಅಧಿವೇಶನದಲ್ಲಿ ಮಹದಾಯಿ ಪ್ರತಿಭಟನೆ ವೇಳೆ ರೈತರ ಬಂಧನ ಬಗ್ಗೆ ಚರ್ಚೆ ನಡೆಯಿತು.
ಅಮಾಯಕ ರೈತರ ಮೇಲಿನ ಎಲ್ಲಾ ಕೇಸ್ ಹಿಂಪಡೆಯುವಂತೆ ವಿಪಕ್ಷಗಳು ಆಗ್ರಹಿಸಿದವು. ವಿಧಾನಸಭೆ ಪ್ರಶ್ನೋತ್ತರ ವೇಳೆ ಕುಡುಚಿ ಶಾಸಕ ರಾಜೀವ್, ರೈತರ ಮೇಲೆ ಡಕಾಯಿತಿ ಪ್ರಕರಣ ಹಾಕಿದ್ದಾರೆ, ಚಳವಳಿ ಹತ್ತಿಕ್ಕುವ ಅಧಿಕಾರ ಸರ್ಕಾರಕ್ಕೆ ಇದೆಯಾ? ಕೂಡಲೇ ರೈತರ ಮೇಲಿನ ಕೇಸ್ ತೆಗೆದುಹಾಕಿ ಅಂತ ರಾಜೀವ್ ಆಗ್ರಹಿಸಿದ್ದಾರೆ.
ಇದಕ್ಕೆ ಉತ್ತರಿಸಿದ ಗೃಹ ಸಚಿವ ಪರಮೇಶ್ವರ್, ಶಾಂತಿಯುತ ಪ್ರತಿಭಟನೆಗೆ ನಮ್ಮ ಆಕ್ಷೇಪ ಇಲ್ಲ, ಆದರೆ ಪ್ರತಿಭಟನೆ ವೇಳೆ 12 ಕಚೇರಿಗಳನ್ನು ಸುಟ್ಟು ಹಾಕಿದ್ದಾರೆ. ಈ ಘಟನೆ ನಡೆಯಬಾರದಿತ್ತು, ಆದರೆ ಬಗ್ಗೆ ವಿಷಾದಿಸುತ್ತೇನೆ, ಅಮಾಯಕ ರೈತರ ಮೇಲಿನ ಕೇಸ್ ಹಿಂಪಡೆಯತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.