ಲಾಹೋರ್‌ನಲ್ಲೇ ಇದ್ದಾರೆ ಅಭಿನಂದನ್: ವಾಘಾದಲ್ಲಿ ಮುಂದುವರೆದ ಕಾಯುವಿಕೆ!

Published : Mar 01, 2019, 08:43 PM ISTUpdated : Mar 01, 2019, 08:55 PM IST
ಲಾಹೋರ್‌ನಲ್ಲೇ ಇದ್ದಾರೆ ಅಭಿನಂದನ್: ವಾಘಾದಲ್ಲಿ ಮುಂದುವರೆದ ಕಾಯುವಿಕೆ!

ಸಾರಾಂಶ

ಮತ್ತೆ ನರಿ ಬುದ್ದಿ ಪ್ರದರ್ಶಿಸಿದ ಪಾಕಿಸ್ತಾನ| ಅಭಿನಂದನ್ ಹಸ್ತಾಂತರ ಪ್ರಕ್ರಿಯೆ ವಿಳಂಬ ಮಾಡುತ್ತಿರುವ ಪಾಕ್| ಅಭಿನಂದನ್ ಇನ್ನೂ ಲಾಹೋರ್‌ನಲ್ಲೇ ಇದ್ದಾರೆ ಎಂಬ ಮಾಹಿತಿ| ಅಭಿನಂದನ್ ಅವರನ್ನು ಇನ್ನೂ ವಾಘಾ ಗಡಿಗೆ ಕರೆತರದ ಪಾಕ್|

ನವದೆಹಲಿ(ಮಾ.01): ಪಾಕ್ ವಶದಲ್ಲಿರುವ ಭಾರತೀಯ ವಾಯುಸೇನೆ ವಿಂಗ್ ಕಮಾಂಡರ್‌ ಅಭಿನಂದನ್ ಬರುವಿಕೆಗಾಗಿ ಇಡೀ ದೇಶ ಕಾತರದಿಂದ ಕಾಯುತ್ತಿದೆ. 

ಆದರೆ ಪಾಕ್ ಮತ್ತೆ ತನ್ನ ನರಿಬುದ್ದಿ ಪ್ರದರ್ಶಿಸಿದ್ದು, ಅಭಿನಂದನ್ ಅವರನ್ನು ಇದುವರೆಗೂ ವಾಘಾ ಗಡಿಗೆ ಕರೆತಂದಿಲ್ಲ ಎಂದು ಮೂಲಗಳು ತಿಳಿಸಿವೆ. ಅಭಿನಂದನ್ ಇನ್ನೂ ಲಾಹೋರ್‌ನಲ್ಲೇ ಇದ್ದು, ಹಸ್ತಾಂತರ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿದೆ.

ಇದಕ್ಕೂ ಮೊದಲು ಪಾಕಿಸ್ತಾನದ ಸೇನಾಧ್ಯಕ್ಷ ಅಮೆರಿಕ, ಆಸ್ಟ್ರೆಲೀಯಾಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು, ಅಭಿನಂದನ್ ಹಸ್ತಾಂತರದ ಬಳಿಕ ಭಾರತ ಮತ್ತೆ ದಾಳಿ ಮಾಡಿದರೆ ಯುದ್ಧ ಮಾಡಲು ಪಾಕಿಸ್ತಾನ ಸಿದ್ಧ ಎಂಬ ಸಂದೇಶವನ್ನು ರವಾನಿಸಿದ್ದರು.

ಈ ಮೊದಲು ಅಭಿನಂದನ್ ಅವರನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂಬ ಸುದ್ದಿ ಬಿತ್ತರವಾಗಿತ್ತು. ಆದರೆ ಸಲಿಗೆ ಅಭಿನಂದನ್ ಇನ್ನೂ ಲಾಹೋರ್‌ನಲ್ಲೇ ಇದ್ದು, ಹಸ್ತಾಂತರ ಪ್ರಕ್ರಿಯೆ ಯಾವಾಗ ನಡೆಯಲಿದೆ ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದು ರಷ್ಯನ್‌ ರುಬೆಲ್‌ಗೆ ಭಾರತದಲ್ಲಿ ಬೆಲೆ ಎಷ್ಟು? ರೂಪಾಯಿ ಅಥವಾ ರುಬೆಲ್‌, ಯಾವುದರ ಮೌಲ್ಯ ಜಾಸ್ತಿ?
ಪುಟಿನ್‌ ಭಾರತಕ್ಕೆ ಬಂದ ಹೊತ್ತಲ್ಲಿಯೇ ಭಾರತಕ್ಕೆ ಮತ್ತೆ ವಿಲನ್‌ ಆದ ಡೊನಾಲ್ಡ್‌ ಟ್ರಂಪ್‌!