
ನವದೆಹಲಿ(ಮಾ.03): ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ 'ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ' ನೀಡಿ ಗೌರವಿಸಲಾಗುವುದು ಎಂದು ಅಖಿಲ ಭಾರತೀಯ ದಿಗಂಬರ ಜೈನ ಮಹಾಸಮಿತಿ ತಿಳಿಸಿದೆ.
ಇದೇ ಏ.17ರ ಭಗವಾನ್ ಮಹಾವೀರ್ ಜಯಂತಿ ದಿನದಂದು ಅಭಿನಂದನ್ ಅವರಿಗೆ ಈ ಪುರಸ್ಕಾರ ನೀಡಲಾಗುವುದು ಅಖಿಲ ಭಾರತೀಯ ದಿಗಂಬರ ಜೈನ ಮಹಾಸಮಿತಿ ತಿಳಿಸಿದೆ.
ಈ ಪ್ರಶಸ್ತಿ 2.51 ಲಕ್ಷ ರೂ. ನೆನಪಿನ ಕಾಣಿಕೆ ಮತ್ತು ಪ್ರಮಾಣಪತ್ರ ಒಳಗೊಂಡಿರುತ್ತದೆ ಎಂದು ಭಾರತೀಯ ದಿಗಂಬರ ಜೈನ ಮಹಾಸಮಿತಿ ತಿಳಿಸಿದೆ.
ಅಭಿನಂದನ್ ಈ ಪ್ರಶಸ್ತಿ ಸ್ವೀಕರಿಸಲಿರುವ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಪಾಕಿಸ್ತಾನದ ಎಫ್-16 ವಿಮಾನವನ್ನು ಬೆನ್ನಟ್ಟಿ ಹೊಡೆದುರುಳಿಸಿದ ಮಿಗ್-21 ವಿಮಾನದ ಪೈಲಟ್ ಅಭಿನಂದನ್ ಅವರಿಗೆ ಈ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಮಹಾಸಮಿತಿಯ ಅಧ್ಯಕ್ಷ ಮುನೀಂದ್ರ ಜೈನ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.