ನೋಟು ನಿಷೇಧ ಬಿಸಿಗೆ ಬಲಿಯಾಯಿತು ಚಳಿಗಾಲ ಅಧಿವೇಶನ

Published : Dec 16, 2016, 07:11 AM ISTUpdated : Apr 11, 2018, 01:05 PM IST
ನೋಟು ನಿಷೇಧ ಬಿಸಿಗೆ ಬಲಿಯಾಯಿತು ಚಳಿಗಾಲ ಅಧಿವೇಶನ

ಸಾರಾಂಶ

ಹಿರಿಯ ನಾಗರಿಕರಿಗೆ ವೈದ್ಯಕೀಯ ಸೇವೆ ಒದಗಿಸುವ ಸಲುವಾಗಿ ಮಂಡನೆಯಾಗಬೇಕಿದ್ದ ಕಡ್ಡಾಯ ಆರೋಗ್ಯ ವಿಮೆ ಮಸೂದೆ, ಮಸೂದೆ, ಮರುಭೂಮಿ ಮತ್ತು ಬರಪೀಡಿತ ಪ್ರದೇಶಗಳಲ್ಲಿ ನೀರು ಒದಗಿಸುವ ಮಹತ್ವದ ಮಸೂದೆ ಸೇರಿದಂತೆ ಹಲವು ಮಸೂದೆಗಳು ಮಂಡನೆಯೇ ಆಗದೆ ಉಳಿದವು.

ನವದೆಹಲಿ (ಡಿ.16): ಸಂಸತ್ತು ಚಳಿಗಾಲ ಅಧೀವೇಶನದ ಕೊನೆಯ ದಿನವಾದ ಇಂದು ಕೂಡಾ ರಾಜ್ಯಸಭೆಯಲ್ಲಿ ಕಲಾಪಗಳು ನಡೆಯಲಿಲ್ಲ. ರಾಜ್ಯ ಸಭೆ ಕಲಾಪಗಳು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ.

ಈ ಬಾರಿಯ ಅಧಿವೇಶನದಲ್ಲಿ  ಒಂದೇ ಒಂದು ದಿನವೂ ಕಲಾಪ ನಡೆಯದೆ ಮುಂದೂಡಲ್ಪಟ್ಟಿರುವುದೇ ಸಾಧನೆ. ಇಡೀ 29 ದಿನದ ಕಲಾಪವನ್ನು ಹಳೆ ನೋಟು ರದ್ದು ವಿಚಾರವೇ ನುಂಗಿಹಾಕಿದೆ.

ನೋಟು ನಿಷೇಧವು ಪ್ರಧಾನಿ ಮೋದಿಯವರ ವೈಯುಕ್ತಿಕ ನಿರ್ಧಾರವಾಗಿದ್ದರಿಂದ ಅವರು ಖುದ್ದಾಗಿ ಬಂದು ಚರ್ಚೆಯಲ್ಲಿ ಭಾಗವಹಿಸಿ ಉತ್ತರ ಕೊಡಬೇಕೆಂದು ಪ್ರತಿಪಕ್ಷಗಳು ಪಟ್ಟುಹಿಡಿದಿದ್ದವು. ಆದರೆ ಪ್ರಧಾನಿ ಮೋದಿ ಕೇವಲ ಒಂದು ಬಾರಿ ಕಲಾಪದಲ್ಲಿ ಉಪಸ್ಥಿತರಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾಷಣವನ್ನು ಆಲಿಸಿದ್ದರು. ಆ ಬಳಿಕ ಅವರು ಚರ್ಚೆಯಲ್ಲಿ ಭಾಗವಹಿಸಲಿಲ್ಲ.

 ಆ ಕಾರಣದಿಂದಾಗಿ ಕೇವಲ, ಗದ್ದಲ, ಪ್ರತಿಭಟನೆಗಳಿಗೆ ಸಾಕ್ಷಿಯಾದ ರಾಜ್ಯಸಭೆಯಲ್ಲಿ ಒಂದೇ ಒಂದು ದಿನವೂ ಕಲಾಪ ನಡೆಯಲಲಿಲ್ಲ. ಚರ್ಚೆಯೂ ನಡೆಯಲಿಲ್ಲ.

ಹಿರಿಯ ನಾಗರಿಕರಿಗೆ ವೈದ್ಯಕೀಯ ಸೇವೆ ಒದಗಿಸುವ ಸಲುವಾಗಿ ಮಂಡನೆಯಾಗಬೇಕಿದ್ದ ಕಡ್ಡಾಯ ಆರೋಗ್ಯ ವಿಮೆ ಮಸೂದೆ, ಮಸೂದೆ, ಮರುಭೂಮಿ ಮತ್ತು ಬರಪೀಡಿತ ಪ್ರದೇಶಗಳಲ್ಲಿ ನೀರು ಒದಗಿಸುವ ಮಹತ್ವದ ಮಸೂದೆ ಸೇರಿದಂತೆ ಹಲವು ಮಸೂದೆಗಳು ಮಂಡನೆಯೇ ಆಗದೆ ಉಳಿದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಳಿಗಾಲಕ್ಕಾಗಿಯೇ ವಿಶೇಷ ಬ್ರೇಕ್‌ಫಾಸ್ಟ್‌ ರೆಸಿಪಿ ತಿಳಿಸಿದ ಬಾಬಾ ರಾಮ್‌ದೇವ್‌, ಇದರಿಂದ ಇದೆ ಸಾಕಷ್ಟು ಪ್ರಯೋಜನ!
ಕಾದು ಕಾದು ಸುಸ್ತಾದ ಶೆಹಬಾಜ್‌ ಷರೀಫ್‌, ಟರ್ಕಿ ಅಧ್ಯಕ್ಷರ ಜೊತೆ ಪುಟಿನ್‌ ಮೀಟಿಂಗ್‌ ವೇಳೆ ಒಳನುಗ್ಗಿದ ಪಾಕ್‌ ಪ್ರಧಾನಿ!