
ಕೋಲಾರ : ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ತೈವಾನಿನ ವಿಸ್ಟನ್ ಟೆಕ್ನಾಲಜಿ ಕಂಪನಿ ಐಪೋನ್ ತಯಾರಿಸುವ ಘಟಕ ಸ್ಥಾಪನೆಗೆ ಮೂರು ಸಾವಿರ ಕೋಟಿ ರು. ಬಂಡವಾಳ ಹೂಡಲು ಮುಂದೆ ಬಂದಿದೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಕಂಪನಿಯ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಘಟಕ ಸ್ಥಾಪನೆಗೆ 42 ಎಕರೆ ಭೂಮಿಯನ್ನು ನೀಡಲಾಗುವುದು, ಸುಮಾರು 15 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದರು. ಈ ಘಟಕದ ಜೊತೆಗೆ ಬಳಸಿದ ಮೊಬೈಲ್ ಫೋನ್ಗಳ ಬಿಡಿಭಾಗಗಳ ಮರು ಬಳಕೆ ಮಾಡುವ ಘಟಕ ಸ್ಥಾಪಿಸುವ ಬಗ್ಗೆ ಕಂಪನಿಯ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ.
ರಾಜ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಎಲ್ಲ ರೀತಿಯ ಪ್ರೋತ್ಸಾಹ ನೀಡಲು ಸರ್ಕಾರ ಬದ್ಧವಾಗಿದೆ. ಬಜೆಟ್ನಲ್ಲಿ ಘೋಷಿಸಿರುವು ದನ್ನು ಜಾರಿ ಮಾಡಲಾಗುವುದು ಎಂದರು. ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.