
ಚೆನ್ನೈ (ಸೆ.29): ಇಂದು ನಡೆದ ಕಾವೇರಿ ಸಂಧಾನ ಸಭೆಯ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಸಿಎಂ ಜಯಲಲಿತಾ ಉದ್ದೇಶಪೂರ್ವಕವಾಗಿ ಕರ್ನಾಟಕ ಸುಪ್ರೀಂ ಆದೇಶವನ್ನು ಉಲ್ಲಂಘನೆ ಮಾಡುತ್ತಿದೆ ಆರೋಪಿಸಿದ್ದಾರೆ.
ಡಿಹೈಡ್ರೇಶನ್ ನಿಂದ ಆಸ್ಪತ್ರೆಗೆ ದಾಖಲಾಗಿರುವ ಅಮ್ಮಾ, ಸಭೆಯ ಸಾರಾಂಶವನ್ನು ಅಲ್ಲಿಗೆ ತರಿಸಿಕೊಂಡು ಓದಿದರು. ಸುಪ್ರೀಂ ಆದೇಶವನ್ನು ಕರ್ನಾಟಕ ಉಲ್ಲಂಘಿಸುತ್ತಿದೆ. ನ್ಯಾಯಾಲಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ.
ತಮಿಳರ ವಿರುದ್ದ ದಂಗೆ ಏಳಲು, ಕಾನೂನು ಉಲ್ಲಂಘಿಸಲು ಕರ್ನಾಟಕ ಸರ್ಕಾರದ ಪಿತೂರಿಯೇ ಕಾರಣ ಎಂದು ಅಮ್ಮಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.