
ಬೆಳಗಾವಿ (ನ.14): ವೈದ್ಯಕೀಯ ನಿಯಂತ್ರಣ ಕಾಯ್ದೆ ವಿಚಾರ ಸಂಬಂಧವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಮುಷ್ಕರ ನಿರತ ಖಾಸಗಿ ವೈದ್ಯರ ಪ್ರತಿನಿಧಿಗಳು ಸುವರ್ಣ ಸೌಧದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ನಾವು ಮಸೂದೆ ನಾಳೆಯೇ ಮಂಡಿಸುತ್ತೇವೆ ಎಂದು ಎಲ್ಲಿ ಹೇಳಿದ್ದೇವೆ? ಅದೇನು ಕಾಯ್ದೆ ಇವತ್ತಿಂದ ನಾಳೆಗೆ ಆಗಿಬಿಡುತ್ತಾ? ನಾನು ಆರೋಗ್ಯ ಸಚಿವ ರಮೇಶ್ ಕುಮಾರ್ ಜೊತೆಗೆ ಮಾತಾನಾಡುತ್ತೇನೆ. ವಿಧೇಯಕದ ಜಂಟಿ ಪರಿಶೀಲತಾ ಸಮಿತಿಯ ಜೊತೆಗೆ ಕೂಡಾ ಮಾತನಾಡುತ್ತೇನೆ. ಅದೆಲ್ಲಾ ಆದ ನಂತರ ನಿಮ್ಮನ್ನು ಕೂಡಾ ಕರೆದು ಮಾತಾಡುತ್ತೇನೆ. ನೀವು ಸುಮ್ಮನೆ ಊಹಿಸಿಕೊಂಡು ಪ್ರತಿಭಟನೆ ಮಾಡೋದು ಸರಿಯಲ್ಲ. ಪ್ರತಿಭಟನೆ ಕೈಬಿಟ್ಟು ವಾಪಸ್ ಹೋಗಿ ಎಂದು ಖಾಸಗಿ ವೈದ್ಯರ ಸಂಘದ ಪ್ರತಿನಿಧಿಗಳ ಜೊತೆ ಮಾತುಕತೆ ವೇಳೆ ಸಿಎಂ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.