7 ವರ್ಷ ಪ್ರೀತಿಸಿ ಮದುವೆ ದಿನವೇ ಕೈಕೊಟ್ಟ ಯುವಕ :ಯುವತಿ ಆತ್ಮಹತ್ಯೆಗೆ ಯತ್ನ

Published : Dec 03, 2017, 01:18 PM ISTUpdated : Apr 11, 2018, 12:47 PM IST
7 ವರ್ಷ ಪ್ರೀತಿಸಿ ಮದುವೆ ದಿನವೇ ಕೈಕೊಟ್ಟ ಯುವಕ :ಯುವತಿ ಆತ್ಮಹತ್ಯೆಗೆ ಯತ್ನ

ಸಾರಾಂಶ

ರಿಯಲ್ ಎಸ್ಟೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಂದೇಶ್  ಶೆಟ್ಟಿ ಎನ್ನುವ ಯುವಕನೀಗ ಇದೀಗ ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳುವುದಿಲ್ಲ ಎನ್ನುವ ಅನುಮಾನದಿಂದ  ಯುವತಿಯನ್ನು ತೊರೆಯುತ್ತಿರುವುದಾಗಿ ಕಾರಣ ನೀಡಿದ್ದಾನೆ. ಇದರಿಂದ ಮನನೊಂದ ಯುವತಿ  ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾಳೆ.

ಹಾಸನ(ಡಿ.3): 7 ವರ್ಷಗಳ ಕಾಲ ಪ್ರೀತಿ ಮಾಡಿ ಮದುವೆ ದಿನವೇ  ಹುಡುಗ - ಹುಡುಗಿಗೆ ಕೈಕೊಟ್ಟ ಪ್ರಕರಣ ಹಾಸನದಲ್ಲಿ ನಡೆದಿದೆ. ಕಳೆದ 7 ವರ್ಷಗಳಿಂದಲೂ ಕೂಡ ಇಬ್ಬರೂ ಲಿವಿಂಗ್ ಟು ಗೆದರ್' ಸಂಬಂಧದಲ್ಲಿ ಇದ್ದರು ಎನ್ನಲಾಗಿದೆ.

ರಿಯಲ್ ಎಸ್ಟೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಂದೇಶ್  ಶೆಟ್ಟಿ ಎನ್ನುವ ಯುವಕನೀಗ ಇದೀಗ ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳುವುದಿಲ್ಲ ಎನ್ನುವ ಅನುಮಾನದಿಂದ  ಯುವತಿಯನ್ನು ತೊರೆಯುತ್ತಿರುವುದಾಗಿ ಕಾರಣ ನೀಡಿದ್ದಾನೆ. ಇದರಿಂದ ಮನನೊಂದ ಯುವತಿ  ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾಳೆ.

ಬೆಂಗಳೂರು ಮೂಲದ ಆಕೆಯೂ ಕೂಡ ಖಾಸಗಿ ಕಂಪನಿಯೊಂದರಲ್ಲಿ ಎಚ್'ಆರ್ ಆಗಿದ್ದಳು ಎನ್ನಲಾಗಿದೆ.  ಹಾಸನದ ಹೊಳೆ ನರಸೀಪುರದ ಕಲ್ಯಾಣ  ಮಂಟಪದಲ್ಲಿ ನಿನ್ನೆ ಹಾಗೂ ಇಂದು ಮದುವೆಯನ್ನು ನಿಶ್ಚಯ ಮಾಡಲಾಗಿತ್ತು. ತಾಳಿ ಕಟ್ಟಬೇಕಾದವನು ಈಗ ಯುವತಿಯನ್ನು ಬಿಟ್ಟು ಪರಾರಿಯಾಗಿದ್ದಾನೆ.

ಕೆಲ ದಿನಗಳ ಹಿಂದೆಯೂ ಕೂಡ ಆಕೆಯನ್ನು  ಹುಡುಗನ ಮನೆಗೆ ಕರೆಸಿಕೊಂಡು ವಿವಿಧ ರೀತಿಯ ಪ್ರಶ್ನೆ ಮಾಡಿ, ಯಾವುದೇ ರೀತಿಯಾದ ಸಮಸ್ಯೆಯಾದರೂ ಕೂಡ ಯಾರಿಗೂ ಹೇಳುವಂತಿಲ್ಲ. ಕೆಲಸಕ್ಕೂ ಹೋಗುವಂತಿಲ್ಲ ಎಂದು ತನಗೆ ಹೇಳಿದ್ದಾಗಿ ಯುವತಿ ಹೇಳಿಕೊಂಡಿದ್ದಾಳೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ