
ಜಬಲ್’ಪುರ : ಬಿಜೆಪಿ ಮುಖಂಡನೋರ್ವ ವ್ಯಕ್ತಿಯೋರ್ವನನ್ನು ಬಗ್ಗಿಸಿ ಮೈಮೇಲೆ ನೀರಿನ ಬಾಟಲ್ ಇರಿಸಿಕೊಳ್ಳಲು ಒತ್ತಾಯಿಸಿ, ಹಿಂಸಾತ್ಮಕವಾಗಿ ನಡೆಸಿಕೊಂಡಿದ್ದಕ್ಕೆ ಮನನೊಂದು ಆತನ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಬಲ್’ಪುರದಲ್ಲಿ ನಡೆದಿದೆ.
ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಜೆಪಿ ಅಲ್ಪಸಂಖ್ಯಾತ ಘಟಕದ ಮುಖಂಡ ವ್ಯಕ್ತಿಯನ್ನು ಬಗ್ಗಿಸಿ ಆತ ಬೆನ್ನ ಮೇಲೆ ನೀರನ್ನು ಇರಿಸಿಕೊಳ್ಳುವಂತೆ ಒತ್ತಾಯಿಸಿದ್ದಾನೆ. ದೃಶ್ಯವೀಗ ಎಲ್ಲೆಡೆ ವಾಟ್ಸಾಪ್’ಗಳಲ್ಲಿ ಹರಿದಾಡುತ್ತಿದೆ.
ಅಲ್ಲದೇ ಆತನನ್ನು ಹಿಂಸಿಸಿದ್ದು, ಬಾಯಿಗೆ ಬಂದಂತೆ ನಿಂದಿಸಲಾಗಿದೆ. ಈ ದೃಶ್ಯವನ್ನು ಕಾಲೇಜಿನಲ್ಲಿ ವೀಕ್ಷಿಸಿದ ಆಕೆ ಮನೆಗೆ ಬಂದವಳೇ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವಳು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ಆಕೆಯ ತಾಯಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.