
ರೋಹಟಕ್(ಡಿ.31): ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧನ ಪತ್ನಿಗೆ ಖಾಸಗಿ ಆಸ್ಪತ್ರೆಯೊಂದು ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ, ಅವರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಹರ್ಯಾಣದ ಸೋನಿಪತ್ನಲ್ಲಿ ನಡೆದಿದೆ.
ಆದರೆ, ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಯಾರಿಗೂ ಚಿಕಿತ್ಸೆ ನಿರಾಕರಿಸಿದ ಆರೋಪವನ್ನು ಆಸ್ಪತ್ರೆ ತಳ್ಳಿ ಹಾಕಿದೆ. ಕಾರ್ಗಿಲ್ನಲ್ಲಿ ಹುತಾತ್ಮರಾದ ಯೋಧ ಹವಾಲ್ದಾರ್ ಲಕ್ಷ್ಮಣ್ ದಾಸ್ ಅವರ ಪತ್ನಿ ಶಕುಂತಲಾ ದೇವಿ ಗಂಟಲು ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದರು. ಹಾಗಾಗಿ, ಶಕುಂತಲಾರನ್ನು ಪುತ್ರ ಪವನ್ ಕುಮಾರ್ ಮತ್ತು ಸೋದರ ಸಂಬಂಧಿ ರವೀಂದರ್ ಅವರು ಆಸ್ಪತ್ರೆಗೆ ಕರೆತಂದಿದ್ದರು.
ಆದರೆ, ಶಕುಂತಲಾ ಅವರ ಆಧಾರ್ ನೀಡುವಂತೆ ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದರು. ಆದರೆ, ಈ ಎಲ್ಲ ಆರೋಪಗಳನ್ನು ತಳ್ಳಿಹಾಕಿರುವ ಆಸ್ಪತ್ರೆಯ ವೈದ್ಯೆ ಡಾ.ದಿವ್ಯಾ ಸಕ್ಸೇನಾ,‘ರೋಗಿಯನ್ನು ಅವರ ಕುಟುಂಬಸ್ಥರೇ ಮತ್ತೊಂದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಮಾರ್ಗಮಧ್ಯೆ ಮಹಿಳೆ ಮೃತಪಟ್ಟಿದ್ದಾರೆ,’ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.