
ಲಖನೌ(ಸೆ.26): ಜಂಗಲ್ ರಾಜ್ ಎಂಬ ಕುಖ್ಯಾತಿಗೆ ಕಾರಣವಾಗಿರುವ ಉತ್ತರಪ್ರದೇಶದಲ್ಲಿ ನಾಗರೀಕ ಸಮಾಜ ತಲೆತಗ್ಗಿಸುವಂಥಾ ಮತ್ತೊಂದು ಘಟನೆ ನಡೆದಿದೆ. ವೈದ್ಯಕೀಯ ನಿರ್ಲಕ್ಷ್ಯದಿಂದಾಗಿ ಆಸ್ಪತ್ರೆಯ ಹೊರಭಾಗದ ಕುದುರೆ ಗಾಡಿಯಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.
ರಾಯ್`ಬರೇಲಿಯ ಮಿರ್ಗುಂಜ್`ನ ಸಿಎಚ್`ಸಿ ಆಸ್ಪತ್ರೆಗೆ ಹೆರಿಗೆಗೆಂದು ಮಹಿಳೆಯನ್ನ ಕರೆತರಲಾಗಿತ್ತು. ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಒಳಗೆ ಪ್ರವೇಶ ಸಿಕ್ಕಿಲ್ಲ. ಹೀಗಾಗಿ, ತುಂಬುಗರ್ಭಿಣಿ ಕುದುರೆಗಾಡಿಯಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.