
ಬೆಂಗಳೂರು (ಮೇ.16): ನೇಪಾಳ ಮೂಲದ ಗೃಹಿಣಿ ಮೇಲೆ ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿರುವ ಘಟನೆವೊಂದು ಬೆಂಗಳೂರು ಹೊರವಲಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಆನೇಕಲ್ ತಾಲೂಕಿನ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸೊಂಪುರ ಗೇಟ್ ಬಳಿ ಈ ಪ್ರಕರಣ ನಡೆದಿದೆ.
ಮೃತ ಗೃಹಿಣಿ ಹಾಗೂ ಪತಿ ಹಲವು ದಿನಗಳಿಂದ ಸೊಂಪುರ ಗೇಟ್ ಬಳಿ ನೆಲೆಸಿದ್ದರು. ನೇಪಾಲ ಮೂಲದ 26 ವರ್ಷದ ಆರೋಪಿ ತಿಲಕ್ ಕೃತ್ಯ ಎಸಗಿ ಪವಿತ್ರ ದೇಹವನ್ನು ಮನೆಯ ಪಕ್ಕದಲ್ಲೆ ಹೂತಿಟ್ಟು ಪರಾರಿಯಾಗಿದ್ದಾನೆ.
ಮೇ 4 ರಂದು ಘಟನೆ ನಡೆದಿದ್ದು, ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಮೃತ ಮಹಿಳೆಯ ಪತಿ ಕಾಣೆಯಾಗಿರುವ ದೂರು ನೀಡಿದ್ದರು. ಸರ್ಜಾಪುರ ಪೊಲೀಸರ ತೀವ್ರ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಸರ್ಜಾಪುರ ಪೊಲೀಸರು ಆರೋಪಿ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.