
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಕೋಟೆ ಕಣ್ಣು ತಪ್ಪಿಸಿ ಚಿನ್ನ ಸಾಗಾಣಿಕೆಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಸೆರೆ ಹಿಡಿದಿದ್ದು, ಅವರಿಂದ 2 ಕೆ.ಜಿ. ಚಿನ್ನ ವಶಪಡಿಸಿ ಕೊಂಡಿದ್ದಾರೆ. ದುಬೈಯಿಂದ ಸೋಮವಾರ ಆಗಮಿಸಿದ ಶಹೀದಾ ಬಾನು ಎಂಬಾಕೆಯನ್ನು ಕಸ್ಟಮ್ ಅಧಿಕಾರಿಗಳು, ವಿಮಾನ ನಿಲ್ದಾಣದಿಂದ ಹೊರ ಹೋಗುವಾಗ ಅನುಮಾನದ ಮೇರೆಗೆ ತಪಾ ಸಣೆ ನಡೆಸಿದ್ದರು.
ಆಗ ಆಕೆಯ ಒಳ ಉಡುಪಿನಲ್ಲಿ ಅಡಗಿಸಿಟ್ಟು ಕೊಂಡಿದ್ದ 796 ಗ್ರಾಂ ಚಿನ್ನದ ಪುಡಿ ಪತ್ತೆಯಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೇ ರೀತಿ ಮತ್ತಿಬ್ಬರು ದುಬೈನಿಂದ ಆಗಮಿಸಿದ ತಮಿಳುನಾಡು ಮೂಲದ ಪ್ರಯಾಣಿಕರು, ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಲೋಹ ಪರಿಶೋಧಕ ವೇಳೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 1,200 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.