ಶಬರಿಮಲೆ ದೇಗುಲ ಪ್ರವೇಶಿಸಲು ಮಹಿಳಾವಾದಿಗಳಿಗೆ ಅವಕಾಶವಿಲ್ಲ :ಕೇರಳ ಸರ್ಕಾರ

Published : Dec 26, 2016, 03:06 PM ISTUpdated : Apr 11, 2018, 12:57 PM IST
ಶಬರಿಮಲೆ ದೇಗುಲ ಪ್ರವೇಶಿಸಲು ಮಹಿಳಾವಾದಿಗಳಿಗೆ ಅವಕಾಶವಿಲ್ಲ :ಕೇರಳ ಸರ್ಕಾರ

ಸಾರಾಂಶ

ಭೂಮಾತಾ ಬ್ರಿಗೇಡ್ ಮುಖ್ಯಸ್ಥೆ ತೃಪ್ತಿ ದೇಸಾಯಿ ಸೇರಿದಂತೆ ಮಹಿಳಾವಾದಿಗಳು ಶಬರಿಮಲೆ ದೇವಸ್ಥಾನದ ಒಳಪ್ರವೇಶಿಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲವೆಂದು ಕೇರಳ ಸರ್ಕಾರ ಹೇಳಿದೆ.

ಶಬರಿಮಲ (ಡಿ.26): ಭೂಮಾತಾ ಬ್ರಿಗೇಡ್ ಮುಖ್ಯಸ್ಥೆ ತೃಪ್ತಿ ದೇಸಾಯಿ ಸೇರಿದಂತೆ ಮಹಿಳಾವಾದಿಗಳು ಶಬರಿಮಲಾ ದೇವಸ್ಥಾನದ ಒಳಪ್ರವೇಶಿಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲವೆಂದು ಕೇರಳ ಸರ್ಕಾರ ಹೇಳಿದೆ.

ತೃಪ್ತಿ ದೇಸಾಯಿ ನೇತೃತ್ವದಲ್ಲಿ ನೂರಾರು ಮಹಿಳೆಯರು ಶಬರಿಮಲಾ ದೇವಸ್ಥಾನ ಪ್ರವೇಶಿಸಲು ಯೋಜಿಸಲಾಗಿತ್ತು. ಇದಕ್ಕೆ ಅವಕಾಶ ನೀಡುವುದಿಲ್ಲವೆಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.

10-50 ವರ್ಷದೊಳಗಿನ ಮಹಿಳೆಯರು ದೇಗುಲ ಪ್ರವೇಶಿಸಲು ನಿರ್ಬಂಧವಿದೆ. ಈ ವಿಚಾರವು ಸುಪ್ರೀಂಕೋರ್ಟಿನಲ್ಲಿದೆ.  ಸುಪ್ರೀಂಕೋರ್ಟ್ ತೀರ್ಪು ನೀಡುವವರೆಗೆ ಯಥಾ ಸ್ಥಿತಿ ಮುಂದುವರೆಯುವುದು ಎಂದು ಶಬರಿಮಲ ಟ್ರಸ್ಟ್ ಹೇಳಿದೆ.

ಸಿಪಿಐ ನೇತೃತ್ವದ ಎಲ್ ಡಿಎಫ್ ಸರ್ಕಾರ ಎಲ್ಲಾ ವಯಸ್ಸಿನ ಮಹಿಳೆಯರಿಗೆ ದೇಗುಲದ ಒಳಗೆ ಪ್ರವೇಶಕ್ಕೆ ಅವಕಾಶ ನೀಡಬೇಕೆಂದು ಕೋರಿ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ.

100 ಜನ ಮಹಿಳೆಯರೊಂದಿಗೆ ಶಬರಿಮಲ ಅಯ್ಯಪ್ಪ ದೇಗುಲ ಪ್ರವೇಶಿಸುವುದಾಗಿ ತೃಪ್ತಿ ದೇಸಾಯಿ ಇತ್ತೀಚಿಗೆ ಹೇಳಿಕೆ ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!