
ಹಾಸನ(ನ.24): ಕಾನೂನು ಬಾಹಿರ ಚಟುವಟಿಕೆಗಳನ್ನು ಪೊಲೀಸರಿಗೆ ತಿಳಿಸಿದ ಪೊಲೀಸ್ ಇನ್ಫಾರ್ಮರ್ ಮೇಲೆಯೇ ಅಮಾನುಷವಾಗಿ, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ. ವಾರದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೈರಾಪುರದ ಗಿರಿಜಾ ಪೊಲೀಸ್ ಇನ್ಫಾರ್ಮರ್ ಆಗಿಯೂ ಸಹ ಕಾರ್ಯನಿರ್ವಹಿಸುತ್ತಿದ್ದಳು.
ಊರಿನಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆ, ಮದ್ಯ ಮಾರಾಟ, ಅತ್ಯಾಚಾರ ಮುಂತಾದ ಕಾನೂನುಬಾಹಿರ ಕೃತ್ಯಗಳ ಬಗ್ಗೆ ಆಲೂರು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಳು. ಈ ವಿಷಯ ಸೋರಿಕೆಯಾಗಿದ್ದು, ಇದರಿಂದ ಕುಪಿತಗೊಂಡ ಭೈರಾಪುರ ಗ್ರಾಮದ ಶೇಖರ್, ಮನು, ರಾಧಾಮಣಿ ಸೇರಿದಂತೆ ಸುಮಾರು 20 ಮಂದಿ ಆಕೆಯನ್ನು ವಿವಸ್ತ್ರಗೊಳಿಸಿ, ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಆದರೆ ಈ ವೇಳೆ ಊರಿನ ಯಾರೊಬ್ಬರೂ ಆಕೆಯ ಸಹಾಯಕ್ಕೆ ಬಂದಿಲ್ಲ. ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.