
ಹಾಸನ (ಫೆ.26): ಗ್ರಾಮದಲ್ಲಿ ಬಾರ್ ತೆರೆದಿರುವುದನ್ನು ವಿರೋಧಿಸಿ ಮಹಿಳೆಯರು ಪ್ರತಿಭಟನೆ ನಡೆಸಿದ ಘಟನೆ ಹಾಸನ ತಾಲ್ಲೂಕಿನ ಕಾಮೇನಹಳ್ಳಿಯಲ್ಲಿ ನಡೆದಿದೆ.
ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ರಾಜ್ಯ ಹೆದ್ದಾರಿಯಲ್ಲಿದ್ದ ಕೆಸಿಪಿ ಬಾರ್ ಕಾಮೇನಹಳ್ಳಿ ಗ್ರಾಮಕ್ಕೆ ಸ್ಥಳಾಂತರಿಸಲಾಗಿತ್ತು. ಇದನ್ನು ತೀವ್ರ ವಿರೋಧಿಸಿದ ಮಹಿಳೆಯರು, ಬಾರ್ ಎದುರು ಪ್ರತಿಭಟನೆ ನಡೆಸಿ ಮುಚ್ಚುವಂತೆ ಆಗ್ರಹಿಸಿದರು.
ಅಂಗಡಿಗೆ ನುಗ್ಗಿ ಬಾಟಲ್ ಗಳನ್ನು ಎಸೆಯಲು ಸಹ ಯತ್ನಿಸಿದರು. ಅಲ್ಲದೇ ಟೈರ್’ಗೆ ಬೆಂಕಿ ಹಚ್ಚಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಹಾಸನ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.