ಅನೈತಿಕ ಸಂಬಂಧ ಶಂಕೆ: ಮಹಿಳೆಗೆ ಬೆತ್ತಲೆಗೊಳಿಸಿ ಥಳಿತ

Published : Jul 04, 2017, 04:16 PM ISTUpdated : Apr 11, 2018, 12:55 PM IST
ಅನೈತಿಕ ಸಂಬಂಧ ಶಂಕೆ: ಮಹಿಳೆಗೆ ಬೆತ್ತಲೆಗೊಳಿಸಿ ಥಳಿತ

ಸಾರಾಂಶ

ಆದರೆ ಸಾವಿತ್ರಿ ಆರೋಪವನ್ನು ತಳ್ಳಿ ಹಾಕಿದ್ದಾಳೆ. ಬದಲಾಗಿ ನಮ್ಮ ಮಧ್ಯೆ ಹಣಕಾಸಿನ ವ್ಯವಹಾರವಿತ್ತು ಎಂದು ಹೇಳಿದ್ದಾಳೆ . ಸದ್ಯ ಸಾವಿತ್ರಿ ಇಂಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ವಿಜಯಪುರ(ಜು.04): ಹಣಕಾಸಿನ ವ್ಯವಹಾರ ಹಾಗೂ ಅನೈತಿಕ ಸಂಬಂಧದ ಶಂಕೆಯಿಂದ ಮಹಿಳೆಯೊಬ್ಬಳನ್ನು ಬೆತ್ತಲೆಗೊಳಿಸಿ ಥಳಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ಹಿರೇ ಮಸಳಿ ಗ್ರಾಮದ ಸಾವಿತ್ರಿ ದುಂಡಯ್ಯ ಗೋಡ್ಯಾಳ ಹಲ್ಲೆಗೊಳಗಾದ ಮಹಿಳೆ. ಈ ಮಹಿಳೆ ಮೌಲಾಲಿ ಎಂಬ ವ್ಯಕ್ತಿಯ ಜೊತೆ ನಿಂತಿದ್ದಾಗ ಮೌಲಾಲಿಯ ಪತ್ನಿ ಸುಗರಾ ಹಾಗೂ ಸುಗರಾಳ ಸಹೋದರ ಸಿಕಂದರ್ ಸೇರಿ ಹಲ್ಲೆ ನಡೆಸಿದ್ದಾರೆ. ಮೌಲಾಲಿ ಜೊತೆ ಸಾವಿತ್ರಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಲಾಗಿದೆ. ಆದರೆ ಸಾವಿತ್ರಿ ಆರೋಪವನ್ನು ತಳ್ಳಿ ಹಾಕಿದ್ದಾಳೆ. ಬದಲಾಗಿ ನಮ್ಮ ಮಧ್ಯೆ ಹಣಕಾಸಿನ ವ್ಯವಹಾರವಿತ್ತು ಎಂದು ಹೇಳಿದ್ದಾಳೆ . ಸದ್ಯ ಸಾವಿತ್ರಿ ಇಂಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇಂಡಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು 9 ಮಂದಿ ವಿರುದ್ಧ ಎಫ್ಐ'ಆರ್ ದಾಖಲಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದಲ್ಲೇ CPR ನೀಡಿ ಅಮೆರಿಕ ಯುವತಿಯ ಪ್ರಾಣ ಉಳಿಸಿದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್
ಪ್ರಧಾನಿ ಮಾಡಿದ್ದೆಲ್ಲಾ ತಪ್ಪು ಅನ್ನೋದು ತಪ್ಪು: ಕೈಗೆ ಮಾಜಿ ಕಾಂಗ್ರೆಸ್ಸಿಗನ ಸಲಹೆ