
ಮುಂಬೈ[ಡಿ.19]: ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಸ್ಮಶಾನಕ್ಕೆ ಬಾಗಿಲು ಹಾಕಿದ ಮತ್ತು ಮೂರು ಮದುವೆಗಳನ್ನು ರದ್ದು ಮಾಡಿದ ಘಟನೆ ನಡೆದಿದೆ.
ಪ್ರಧಾನಿ ಭದ್ರತೆ ಹೆಸರಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತು ಪೊಲೀಸರ ವರ್ತನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಮೋದಿ ಕಾರ್ಯಕ್ರಮ ನಡೆಯುವ ಸ್ಥಳದಿಂದ 200 ಮೀಟರ್ ದೂರದಲ್ಲಿದ್ದ ಸ್ಮಶಾನಕ್ಕೆ ಸೋಮವಾರ ರಾತ್ರಿಯಿಂದಲೇ ಯಾವುದೇ ಶವಗಳನ್ನು ತರದಂತೆ ನಿಷೇಧಿಸಲಾಗಿತ್ತು.
ಅಲ್ಲದೆ ಮೋದಿ ಕಾರ್ಯಕ್ರಮ ನಡೆಯಬೇಕಿದ್ದ ಸ್ಥಳದ ಸಮೀಪವೇ 3 ಕಲ್ಯಾಣ ಮಂಟಪದಲ್ಲಿ ನೆರವೇರಬೇಕಿದ್ದ 3 ವಿವಾಹ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ