
ಸಾಂಗ್ಲಿ[ಆ.13]: ಕಳೆದೊಂದು ವಾರದಿಂದ ಭಾರೀ ಪ್ರಮಾಣದಲ್ಲಿ ಸುರಿದ ಮಳೆ ಮತ್ತು ಪ್ರವಾಹದಿಂದಾಗಿ ಸಾಂಗ್ಲಿ ಮತ್ತು ಕೊಲ್ಹಾಪುರ ಜಿಲ್ಲೆಯ ಲಕ್ಷಾಂತರ ಜನ ಅಪಾಯದಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಇಂಥ ವೇಳೆ ಎನ್ಡಿಆರ್ಎಫ್ ಮತ್ತು ಭಾರತೀಯ ಸೇನೆ ಸಕಾಲದಲ್ಲಿ ಆಗಮಿಸಿ ಲಕ್ಷಾಂತರ ಜನರನ್ನು ಅಪಾಯದಿಂದ ಪಾರು ಮಾಡಿತ್ತು.ರಕ್ಷಣಾ ಕಾರ್ಯ ಪೂರ್ಣಗೊಂಡ ಬಳಿಕ ಯೋಧರು ಸೋಮವಾರ ತಮ್ಮ ಸ್ವಸ್ಥಾನಗಳಿಗೆ ಮರಳಲು ಆರಂಭಿಸಿದ್ದಾರೆ.
ವರುಣನ ಅಬ್ಬರಕ್ಕೆ ಕರುನಾಡು ತತ್ತರ: ಮಳೆಗೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಕ್ಲಿಕ್ಕಿಸಿ
ಈ ವೇಳೆ ತಮ್ಮನ್ನು ಪ್ರಾಣಾಪಾಯದಿಂದ ಕಾಪಾಡಿದ್ದ ಯೋಧರಿಗೆ ರಾಖಿ ಕಟ್ಟಿಸೋದರಿಯರ ಪ್ರೀತಿ ತೋರಿದ ಸಾಂಗ್ಲಿಯ ಮಹಿಳೆಯರು, ಯೋಧರಿಗೆ ಆರತಿ ಬೆಳಗಿ ಶುಭ ಹಾರೈಸಿ ಬೀಳ್ಕೊಟ್ಟಿದ್ದಾರೆ. ಈ ವೇಳೆ ತಮ್ಮ ಜೀವ ಕಾಪಾಡಿದ ಯೋಧರಿಗೆ ಕಣ್ಣೀರಿನ ವಿದಾಯ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.