
ವಿಜಯಪುರ: ತೀವ್ರ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೆ ಗಂಭೀರವಾಗುತ್ತಿದ್ದು, ಇದರ ಬಿಸಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೂ ತಟ್ಟಿದೆ. ನೀರಿನ ಸಮಸ್ಯೆಯಿಂದಾಗಿ ವಿವಿಗೆ ಐದು ದಿನ ರಜೆ ಘೋಷಿಸಲಾಗಿದೆ.
ವಿವಿಗೆ ವಿಜಯಪುರ ಜಲಮಂಡಳಿ ಯಿಂದ ಪೂರೈಕೆಯಾಗುವ ನೀರೇ ಆಧಾರ. 15 ದಿನಗಳಿಂದ ಕೊಲ್ಹಾರ ಬಳಿ ಕೃಷ್ಣಾ ನದಿಯಲ್ಲಿ ನೀರು ಖಾಲಿಯಾಗಿದ್ದು, ನಗರಕ್ಕೆ ತಿಂಗಳಿಗೆ ಎರಡು ಬಾರಿ ನೀರು ಪೂರೈಕೆಯಾಗುತ್ತಿದೆ. ಇದರ ಪರಿಣಾಮ ವಿವಿಯಲ್ಲಿ ನೀರಿಗೆ ಹಾಹಾಕಾರ ಎದ್ದಿದ್ದು, ಕಳೆದೊಂದು ವಾರದಿಂದ ಟ್ಯಾಂಕರ್ ನೀರು ಖರೀದಿಸಿ ಸಮಸ್ಯೆ ನಿಭಾಯಿಸಲು ಪ್ರಯತ್ನ ಮಾಡಲಾಗಿತ್ತಾದರೂ ಅದು ಫಲ ನೀಡಲಿಲ್ಲ.
ಇನ್ನು ಕ್ಯಾಂಪಸ್ನಲ್ಲಿ 7 ಕೊಳವೆ ಬಾವಿಗಳಿದ್ದರೂ ಅವು ಕೂಡ ಬತ್ತಿ ಹೋಗಿವೆ. ಈ ಹಿನ್ನೆಲೆಯಲ್ಲಿ ಮೇ 5ರಿಂದ 9ರವರೆಗೆ ವಿವಿಗೆ ರಜೆ ಘೋಷಿಸಲಾಗಿದೆ. ಹಿಂದೊಮ್ಮೆ ನೀರಿಲ್ಲದೆ ಕಲಬುರಗಿಯ ಕೇಂದ್ರೀಯ ವಿವಿಗೆ 15 ದಿನ ರಜೆ ಘೋಷಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.