
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 11400 ಕೋಟಿ ರು. ವಂಚನೆ ಎಸಗಿದ ಆರೋಪ ಎದುರಿಸುತ್ತಿರುವ ಉದ್ಯಮಿ ನೀರವ್ ಮೋದಿ, ತಮ್ಮ ಕಂಪನಿಯ ಉದ್ಯೋಗಿಗಳಿಗೆ ಬೇರೆಡೆ ಕೆಲಸ ಹುಡುಕಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಮ್ಮೆಲ್ಲಾ ಬ್ಯಾಂಕ್ ಖಾತೆಗಳನ್ನುಜಪ್ತಿ ಮಾಡಿದ್ದಾರೆ. ಜೊತೆಗೆ ತನಿಖಾ ಸಂಸ್ಥೆಗಳು ಕಂಪನಿಯ ದಾಸ್ತಾನುಗಳನ್ನು ವಶಪಡಿಸಿಕೊಂಡಿದ್ದಾರೆ. ಹೀಗಾಗಿ ನಾನು ನಿಮಗೆ ವೇತನ ನೀಡುವುದು ಸಾಧ್ಯವಾಗದು. ಹೀಗಾಗಿ ನೀವೆಲ್ಲಾ ಬೇರೆಡೆ ಉದ್ಯೋಗ ಹುಡುಕಿಕೊಳ್ಳಿ ಎಂದು ಸಿಬ್ಬಂದಿ ನೀರವ್ ಮೋದಿ ಇ ಮೇಲ್ನಲ್ಲಿ ಸಂದೇಶ ರವಾನಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಆಂಗ್ಲಪತ್ರಿಕೆಯೊಂದು ವರದಿ ಮಾಡಿದೆ.
ವಂಚನೆ ಪ್ರಕರಣ ಸಂಬಂಧ ಸಿಬಿಐ, ಇಡಿ ಸಂಸ್ಥೆಗಳು ನೀರವ್ ಮೋದಿಗೆ ಸೇರಿದ ಮನೆ, ಕಚೇರಿ ಮೇಲೆ ದಾಳಿ ನಡೆಸಿ 5000 ಕೋಟಿ ರು.ಗೂ ಹೆಚ್ಚಿನ ಮೊತ್ತದ ನಗದು, ಚಿನ್ನಾಭರಣ ಮತ್ತು ಆಸ್ತಿ ವಶಪಡಿಸಿಕೊಂಡಿವೆ. ಮತ್ತೊಂದೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೀರವ್ ಮತ್ತು ಅವರ ಕಂಪನಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.