ಇಂದು ವಿಶ್ವ ವನ್ಯಜೀವಿ ದಿನ; ಪಟ್ನಾಯಕ್ ಕೈಯಲ್ಲಿ ಅರಳಿದ ಸ್ಯಾಂಡ್ ಆರ್ಟ್

Published : Mar 03, 2017, 01:30 PM ISTUpdated : Apr 11, 2018, 12:48 PM IST
ಇಂದು ವಿಶ್ವ ವನ್ಯಜೀವಿ ದಿನ; ಪಟ್ನಾಯಕ್ ಕೈಯಲ್ಲಿ ಅರಳಿದ ಸ್ಯಾಂಡ್ ಆರ್ಟ್

ಸಾರಾಂಶ

ವಿಶ್ವಸಂಸ್ಥೆಯು 2013ರಲ್ಲಿ ವಿಶ್ವ ವನ್ಯಜೀವಿ ದಿನವನ್ನು ಜಾರಿಗೆ ತಂದಿದ್ದು, ಪ್ರತಿವರ್ಷ ಒಂದೊಂದು ಧ್ಯೇಯವಾಕ್ಯದೊಂದಿಗೆ ಈ ದಿನವನ್ನು ಆಚರಿಸಲಾಗುತ್ತದೆ.

ನವದೆಹಲಿ(ಮಾ.03): ಭೂಮಿಯಲ್ಲಿರುವ ಪ್ರಾಣಿಗಳ ಬಗ್ಗೆ ಅರಿವು ಮೂಡಿಸಲು ಪ್ರತಿವರ್ಷ ಮಾರ್ಚ್ 3ರಂದು ವಿಶ್ವ ವನ್ಯಜೀವಿ ದಿನವನ್ನಾಗಿ ಆಚರಿಸಲಾಗುತ್ತದೆ.

ವಿಶ್ವಸಂಸ್ಥೆಯು 2013ರಲ್ಲಿ ವಿಶ್ವ ವನ್ಯಜೀವಿ ದಿನವನ್ನು ಜಾರಿಗೆ ತಂದಿದ್ದು, ಪ್ರತಿವರ್ಷ ಒಂದೊಂದು ಧ್ಯೇಯವಾಕ್ಯದೊಂದಿಗೆ ಈ ದಿನವನ್ನು ಆಚರಿಸಲಾಗುತ್ತದೆ. ಅದರಂತೆ ಈ ವರ್ಷ "ಲಿಸನ್ ಟು ದ ಯಂಗ್ ವಾಯ್ಸ್'ಸ್" ಘೋಷವಾಕ್ಯದೊಂದಿಗೆ ಜಗತ್ತಿನಾದ್ಯಂತ ವಿಶ್ವ ವನ್ಯಜೀವಿ ದಿನವನ್ನಾಗಿ ಆಚರಿಸಲಾಯಿತು.

ಜಗತ್ತಿನಾದ್ಯಂತ ಸುಮಾರು 10-24 ವಯೋಮಾನದ ಯುವಕರು ಶೇಕಡ 25ರಷ್ಟಿದ್ದು ವನ್ಯಜೀವಿ ಕಾಪಾಡುವ ನಿಟ್ಟಿನಲ್ಲಿ ಪರಿಣಾಮಕಾರಿ ನಿರ್ಧಾರ ಕೈಗೊಳ್ಳುವ ವಿಶ್ವಾಸ ವಿಶ್ವಸಂಸ್ಥೆಯದ್ದಾಗಿದೆ.

ಈ ಸಂದರ್ಭದಲ್ಲಿ ದೇಶದ ಪ್ರಸಿದ್ಧ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್ ಪ್ರಾಣಿಗಳನ್ನು ಕಾಪಾಡಿ ಎನ್ನುವ ಸಂದೇಶ ಸಾರುವ ಸುಂದರವಾದ ಆಕೃತಿಯನ್ನು ರಚಿಸಿ ಗಮನ ಸೆಳೆದಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್
ಭಾರತದ ಬೀಡಿಗೆ ಫಿದಾ ಆದ ರಷ್ಯನ್ನರು, ಒಂದು ಪ್ಯಾಕೆಟ್‌ ಇಷ್ಟು ದುಬಾರಿನಾ?