
ಹೈದ್ರಾಬಾದ್ : ಈಗಾಗಲೇ ಎನ್’ಡಿಎಯೊಂದಿಗೆ ಟಿಡಿಪಿ ಮೈತ್ರಿ ಮುರಿದು ಬಿದ್ದಿದ್ದು, ಈ ಬಗ್ಗೆ ಇದೀಗ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದೀಗ ಯಾವುದೇ ಕಾರಣಕ್ಕೂ ಮಾಜಿಯವರಂದಿಗೆ ಕೈ ಜೋಡಿಸುವುದಿಲ್ಲ ಎದು ಹೇಳಿದ್ದಾರೆ. ಅಲ್ಲದೇ ತಾವು 15ಕ್ಕೂ ಹೆಚ್ಚು ಸೀಟ್’ಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಹಿಂದೆ ಬಿಜೆಪಿಯೊಂದಿಗೆ ನಾವು ಕೈ ಜೋಡಿಸಿದ್ದೆವು. ಇದರಲ್ಲಿ ಯಾವುದೇ ರೀತಿಯಾದ ರಾಜಕೀಯ ಉದ್ದೇಶವಿರಲಿಲ್ಲ. ಅಭಿವೃದ್ಧಿಯನ್ನು ಸಾಧಿಸುವುದು ಮಾತ್ರವೇ ನಮ್ಮ ಗುರಿಯಾಗಿತ್ತು.
ವಿಶೇಷ ಸ್ಥಾನಮಾನವನ್ನು ನೀಡುವುದಾಗಿ ಕೇಂದ್ರ ಸರ್ಕಾರ ಮೋಸ ಮಾಡಿದೆ ಎಂದು ಅವರು ಈ ವೇಳೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸುಳ್ಳು ಮಾತ್ರ ಪ್ರಚಾರ ಮಾಡುತ್ತದೆ ಎಂದು ಅವರು ಹೇಳಿಕೆ ನೀಡಿದ್ದಾರೆ.
ನಮಗೆ ಈ ಬಗ್ಗೆ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಈಗ ಮಾತ್ರ ಈಶಾನ್ಯ ರಾಜ್ಯಗಳತ್ತ ಹೆಚ್ಚು ಗಮನ ಹರಿಸುತ್ತಿದೆ ಎಂದು ಅವರು ಹೇಳಿದ್ದಾರೆ. ನಮ್ಮ ಭರವಸೆ ಈಡೇರದ ಕಾರಣದಿಂದ ನಾವು ಬಿಜೆಪಿಯನ್ನು ತೊರೆದು ಹೊರಬರಬೇಕಾಯಿತು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.