ಉಪೇಂದ್ರ ಪಕ್ಷದ ಬಗ್ಗೆ ಮೈಸೂರು ಮಹಾರಾಜ ಯದುವೀರ್ ಮೆಚ್ಚುಗೆ

Published : Nov 13, 2017, 04:34 PM ISTUpdated : Apr 11, 2018, 01:06 PM IST
ಉಪೇಂದ್ರ ಪಕ್ಷದ ಬಗ್ಗೆ ಮೈಸೂರು ಮಹಾರಾಜ ಯದುವೀರ್ ಮೆಚ್ಚುಗೆ

ಸಾರಾಂಶ

ನಟ ಉಪೇಂದ್ರ ಸ್ಥಾಪಿಸಿರುವ ಪಕ್ಷದ ಬಗ್ಗೆ ಮೈಸೂರು ಮಹಾರಾಜ ಯದುವೀರ್ ಅವರು ಹೇಳಿಕೆ ನೀಡಿದ್ದಾರೆ. ‘ಉಪೇಂದ್ರ ಪ್ರಜಾಕೀಯ ಪಕ್ಷ ಕಟ್ಟಿದ್ದು ಒಳ್ಳೆದಾಯಿತು, ಹೊಸ ಆಲೋಚನೆ ಇಟ್ಟುಕೊಂಡು ಉಪೇಂದ್ರ ಅವರು ಪಕ್ಷ ಸ್ಥಾಪಿಸಿದ್ದಾರೆ,  ಸ್ವತಂತ್ರವಾಗಿ ಮಾಡುತ್ತಿರುವುದು ಒಳ್ಳೆಯದು’ ಎಂದು ಯದವೀರ್ ಹೇಳಿದ್ದಾರೆ.

ಚಾಮರಾಜನಗರ: ನಟ ಉಪೇಂದ್ರ ಸ್ಥಾಪಿಸಿರುವ ಪಕ್ಷದ ಬಗ್ಗೆ ಮೈಸೂರು ಮಹಾರಾಜ ಯದುವೀರ್ ಅವರು ಹೇಳಿಕೆ ನೀಡಿದ್ದಾರೆ.

‘ಉಪೇಂದ್ರ ಪ್ರಜಾಕೀಯ ಪಕ್ಷ ಕಟ್ಟಿದ್ದು ಒಳ್ಳೆದಾಯಿತು, ಹೊಸ ಆಲೋಚನೆ ಇಟ್ಟುಕೊಂಡು ಉಪೇಂದ್ರ ಅವರು ಪಕ್ಷ ಸ್ಥಾಪಿಸಿದ್ದಾರೆ,  ಸ್ವತಂತ್ರವಾಗಿ ಮಾಡುತ್ತಿರುವುದು ಒಳ್ಳೆಯದು’ ಎಂದು ಯದವೀರ್ ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕುರುಬರಕಟ್ಟೆ ಗ್ರಾಮದಲ್ಲಿ ಶ್ರೀಧರೆಗೆ ದೊಡ್ಡವರ ಸಂಸ್ಥಾನ ಮಠದ ಧ್ಯಾನ ಮಂದಿರ ಉದ್ಘಾಟಿಸಿ ಯದುವೀರ್ ಮಾತನಾಡಿದರು.

‘ಕರ್ನಾಟಕ್ಕೆ ಇನ್ನೊಂದು ಹೊಸ ಆಲೋಚನೆ ಬೇಕಾಗಿತ್ತು, ‘ಆ ಹೊಸ ಆಲೋಚನೆ ಉಪೇಂದ್ರ ಅವರು ಮಾಡಿದ್ದಾರೆ, ಈ ರೀತಿ ಪಕ್ಷ ಕರ್ನಾಟಕ್ಕೆ ಬೇಕಾಗಿತ್ತು, ಈ ಮೂಲಕ ಕರ್ನಾಟಕ್ಕೆ ಒಳ್ಳೆಯದು ಮಾಡಲಿ’ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ತನ್ನ ರಾಜಕೀಯ ನಡೆಯ ಬಗ್ಗೆ ಮಾತನಾಡಿದ ಯದುವೀರ್, ‘ನನಗೆ ಸದ್ಯಕ್ಕೆ ರಾಜಕೀಯದ ಬಗ್ಗೆ ಆಸಕ್ತಿ ಇಲ್ಲ’ ಎಂದು ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

PM Modi: ಮತ್ತೆ ದಕ್ಷಿಣದತ್ತ ಮುಖ ಮಾಡಿದ ಪ್ರಧಾನಿ: ರಾಜಕೀಯ ಮಹತ್ವ ಪಡೆದ ಮೋದಿ ನಡೆ
Delhi Air Quality: ನಿಬಂಧನೆಗಳು ಜಾರಿಯಲ್ಲಿದ್ರೂ ಪಾತಾಳಕ್ಕೆ ಕುಸಿದ ದೆಹಲಿ ವಾಯುಗುಣಮಟ್ಟ