ಟೂರಿಸಂ ಅಂಬಾಸಿಡರ್ ಆಗಿ ಯದುವೀರ್?

Published : Sep 19, 2018, 06:46 PM IST
ಟೂರಿಸಂ ಅಂಬಾಸಿಡರ್ ಆಗಿ ಯದುವೀರ್?

ಸಾರಾಂಶ

ಟೂರಿಸಂ ರಾಯಭಾರಿಯಾಗಿ ಯದುವೀರ್ | ಯದುವೀರ್ ಜೊತೆ ಮಾತುಕತೆ ನಡೆಸಿದ ಸಾ ರಾ ಮಹೇಶ್ | ಇನ್ನೂ ನಿರ್ಧಾರ ತಿಳಿಸಿದ ಯದುವೀರ್ 

ಮೈಸೂರು (ಸೆ. 19):  ಪ್ರವಾಸೋದ್ಯಮ ಇಲಾಖೆಗೆ ಮೈಸೂರು ಭಾಗದ ಬ್ರಾಂಡ್ ಅಂಬಾಸಿಡರ್ ಆಗುವಂತೆ ಯದುವೀರ್ ಜೊತೆ ಪ್ರವಾಸೋದ್ಯಮ ಸಚಿವ ಸಾ ರಾ ಮಹೇಶ್ ಮಾತುಕತೆ ನಡೆಸಿದ್ದಾರೆ.  

ಇಂದು ಮೈಸೂರು ಅರಮನೆಗೆ ಸಾ ರಾ ಮಹೇಶ್ ಭೇಟಿ ನೀಡಿ ಯದುವೀರ್ ಜೊತೆ ಮಾತುಕತೆ ನಡೆಸಿದ್ದಾರೆ.  ಹಳೆ ಮೈಸೂರು ಭಾಗದಲ್ಲಿ ಯದುವೀರ್ ಅವರನ್ನ ಬಳಸಿಕೊಂಡು ಪ್ರಚಾರ ಕೈಗೊಳ್ಳುವ ಚಿಂತನೆ ನಡೆಸಲಾಗಿದೆ. 

ರಾಜ್ಯದ ವಿವಿಧ ಭಾಗಗಳಲ್ಲಿ, ವಿವಿಧ ವ್ಯಕ್ತಿಗಳನ್ನ ರಾಯಭಾರಿಯಾಗಿ ಆಯ್ಕೆ ಮಾಡಲು ಚಿಂತನೆ ನಡೆಸಲಾಗಿದ್ದು ಈ ಹಿನ್ನೆಲೆಯಲ್ಲಿ ಯದುವೀರ್ ಜೊತೆ ಮಾತುಕತೆ ನಡೆಸಿದ್ದಾರೆ.  ಬ್ರಾಂಡ್ ಅಂಬಾಸಿಡರ್ ವಿಚಾರವಾಗಿ ಮಾತುಕತೆ ನಡೆಸಲು ಬಂದಿದ್ದೆ. ಸದ್ಯ ಯದುವೀರ್ ಗೆ ಮನವಿ ಮಾಡಿದ್ದೇವೆ. ಯದುವೀರ್ ಅವರ ನಿರ್ಧಾರವನ್ನು ಸದ್ಯದಲ್ಲೇ ತಿಳಿಸಲಿದ್ದಾರೆ ಎಂದು ಮೈಸೂರು ಅರಮನೆಯಲ್ಲಿ  ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Glanders disease : ಮಾರಕ ರೋಗದ ಭೀತಿ, ರೇಸ್ ಕೋರ್ಸ್ ಸುತ್ತ ಕತ್ತೆ ಕುದುರೆ ಹೆಸರಗತ್ತೆ ಓಡಾಟಕ್ಕೆ ನಿರ್ಬಂಧ!
'ಎರಡನೆ ಬೆಳೆಗೆ ನೀರಿಲ್ಲ, ಸಸಿ ನಾಟಿ ಮಾಡಬೇಡಿ' ತುಂಗಭದ್ರಾ ರೈತರಿಗೆ ಸಚಿವ ತಂಗಡಗಿ ಅಚ್ಚರಿಯ ಸಲಹೆ!