
ಮೈಸೂರು ಸಂಸ್ಥಾನದ ಉತ್ತರಾಧಿಕಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇವತ್ತು ಸರ್ಕಾರಿ ಶಾಲೆಗೆ ತೆರೆಳಿ ಮಕ್ಕಳಿಗೆ ಪಾಠ ಹೇಳಿಕೊಟ್ಟಿದ್ದಾರೆ. ಮೈಸೂರಿನ ಕುಂಬಾರಕೊಪ್ಪಲಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿಕೊಟ್ಟಿದ್ದ ಅವರು, ಮಕ್ಕಳೊಂದಿಗೆ ಸಂವಾದ ನಡೆಸಿ, ಬುದ್ದಿಮಾತು ಹೇಳಿದರು. ಸರ್ಕಾರಿ ಶಾಲೆಗಳನ್ನು ಉಳಿಸುವ ಉದ್ದೇಶದಿಂದ ಮೈಸೂರಿನ ಕಲಿಸು ಫೌಂಢೇಶನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಯದುವೀರ್ ಪಾಲ್ಗೊಂಡಿದ್ದರು. ಮಕ್ಕಳೊಂದಿಗೆ ಒಂದು ಗಂಟೆಗೂ ಹೆಚ್ಚುಕಾಲ ಕಳೆದ ಅವರು, ಪರಿಸರ ಕಾಳಜಿ ಬಗ್ಗೆ ಮಕ್ಕಳಿಗೆ ತಿಳಿ ಹೇಳಿದರು. ಪರಿಸರ ಸಂರಕ್ಷಣೆ ದಿನನಿತ್ಯದ ಕೆಲಸ. ಸುತ್ತಮುತ್ತಲಿದ ಪರಿಸರವನ್ನು ಸುಚಿತ್ವದಿಂದ ಇಟ್ಟುಕೊಳ್ಲುವುದು, ಪ್ಲಾಸ್ಟಿಕ್ನಿಂದ ಆಗುವ ಹಾನಿಯನ್ನು ಮನಗಂಡು, ಪರಿಸರವನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸುವ ಬಗ್ಗೆ ಮಕ್ಕಳಿಗೆ ಹೇಳಿಕೊಟ್ಟರು. ಇದರ ಜೊತೆಗೆ ಮಕ್ಕಳಿಗೆ ಗಣಿತ ಪಾಠವನ್ನು ಯದಿವೀರ್ ಹೇಳಿಕೊಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.