ರಾಜ್ಯ ಸರ್ಕಾರದ ವಿರುದ್ಧ ಯದುವೀರ್ ಒಡೆಯರ್ ಚಾಟಿ

Published : Jul 26, 2018, 03:52 PM IST
ರಾಜ್ಯ ಸರ್ಕಾರದ ವಿರುದ್ಧ ಯದುವೀರ್ ಒಡೆಯರ್ ಚಾಟಿ

ಸಾರಾಂಶ

ರಾಜ್ಯ ಸರ್ಕಾರದ ವಿರುದ್ಧ ಮೈಸೂರು ಮಹಾರಾಜ ಯದುವೀರ್ ಒಡೆಯರ್ ವಾಗ್ದಾಳಿ ನಡೆಸಿದ್ದಾರೆ.  ಜುಲೈ 18ರಂದು ಜಯಚಾಮರಾಜೇಂದ್ರ ಒಡೆಯರ್ ಜನ್ಮದಿನ ಆಚರಣೆ ಮಾಡಲಾಗಿದ್ದು ಈ ವೇಳೆ ಅವರನ್ನು ಸ್ಮರಿಸದ ಸರ್ಕಾರ ವಿರುದ್ಧ ಚಾಟಿ ಬೀಸಿದ್ದಾರೆ. 

ಮೈಸೂರು :  ಜುಲೈ 18ರಂದು ಜಯಚಾಮರಾಜೇಂದ್ರ ಒಡೆಯರ್ ಜನ್ಮದಿನ ಆಚರಣೆ ಮಾಡಲಾಗಿದ್ದು, ಈ ವೇಳೆ ಒಡೆಯರ್ ಅವರನ್ನು ಸ್ಮರಿಸದ ಸರ್ಕಾರದ ವಿರುದ್ಧ ಯದುವೀರ್ ಒಡೆಯರ್ ಚಾಟಿ ಬೀಸಿದ್ದಾರೆ. 

ತಾತನಿಗೆ ಅಕ್ಷರ ನಮನ ಸಲ್ಲಿಸಿ ಮಾತನಾಡಿದ ಯದುವೀರ್ ಒಡೆಯರ್, ಈ ವಿಚಾರದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.  ಇನ್ನು ಇದೇ ವೇಳೆ ರಾಜವಂಶಸ್ಥರ ಖಾಸಗಿ ಮುಖವಾಣಿ ಗಂಡಬೇರುಂಡದ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದ್ದಾರೆ. 

ಈ ಸಂಚಿಕೆಯಲ್ಲಿ ಮೈಸೂರು ಸಂಸ್ಥಾನಕ್ಕೆ ಒಡೆಯರ್ ಕೊಡುಗೆಗಳ ಮಾಹಿತಿಯನ್ನು ನೀಡಲಾಗಿದೆ.  ರಾಜವಂಶಸ್ಥರ ಅಮೂಲ್ಯ ಅಲ್ಬಂನಲ್ಲಿರುವ  ಫೋಟೋ ಬಳಸಿ ಸಚಿತ್ರ ವರದಿ ತಯಾರು ಮಾಡಲಾಗಿದೆ. 

ಜಯಚಾಮರಾಜೇಂದ್ರ ಒಡೆಯರ್ ಅವರ  99ನೇ ವರ್ಷದ ಜನ್ಮದಿನವನ್ನು ಸರ್ಕಾರ ಆಚರಣೆ ಮಾಡಲು ಮರೆತಿದ್ದು, ಶತಮಾನೋತ್ಸವವನ್ನಾದರೂ ಆಚರಿಸಲು ಇದುವೇ ಸಂದೇಶ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Explainer: ವಿಶ್ವದ ಅತಿದೊಡ್ಡ ಏರ್‌ಲೈನ್ಸ್‌ ಸ್ಮಶಾನವಾದ ಭಾರತ, ದೇಶದಲ್ಲಿ ವಿಮಾನ ಕಂಪನಿ ಬದುಕೋದು ಯಾಕೆ ಕಷ್ಟ?
ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ