
ಮೈಸೂರು: ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪತ್ನಿ ತ್ರಿಷಿಕಾ ಕುಮಾರಿ ಅವರು ಭಾನುವಾರ ಮಧ್ಯಾಹ್ನ ಬೆಂಗಳೂರಿನಿಂದ ಶತಾಬ್ದಿ ರೈಲಿನಲ್ಲಿ ನಗರಕ್ಕೆ ಆಗಮಿಸಿದರು.
ಮಹಾರಾಣಿ ರೈಲಿನಲ್ಲಿ ಪ್ರಯಾಣಿಸುತ್ತಿರುವುದನ್ನು ಕಂಡು ಪ್ರಯಾಣಿಕರಲ್ಲಿ ಕುತೂಹಲ ಮೂಡಿತು. ಗರ್ಭಿಣಿಯಾಗಿರುವ ಅವರು ಬೆಂಗಳೂರಿನ ಅರಮನೆಯಲ್ಲಿದ್ದು, ರಸ್ತೆ ಪ್ರಯಾಣ ಬೇಡ ಎಂಬ ವೈದ್ಯರ ಸಲಹೆ ಮೇರೆಗೆ ಪತಿ ಯದುವೀರ್ ಅವರೊಂದಿಗೆ ಬೆಳಗ್ಗೆ 11 ಗಂಟೆಗೆ ಹೊರಟು 1.30ಕ್ಕೆ ಮೈಸೂರು ತಲುಪಿದರು.
ಬಳಿಕ ಸಂಜೆ ಅರಮನೆಯಲ್ಲಿ ನಡೆದ ಕೃಷ್ಣ ಪೂಜೆಯಲ್ಲಿ ಪಾಲ್ಗೊಂಡರು. ಸೆ.21ರಿಂದ ದಸರಾ ಮಹೋತ್ಸವ ಹಾಗೂ ರಾಜವಂಶಸ್ಥರ ಖಾಸಗಿ ದರ್ಬಾರ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ತ್ರಿಷಿಕಾ ಕುಮಾರಿ ಭಾಗವಹಿಸುವುದು ಅವಶ್ಯವಾಗಿರುವುದರಿಂದ ಗರ್ಭಿಣಿಯಾಗಿದ್ದರೂ ಆಗಮಿಸಿದ್ದಾರೆ. ಅರಮನೆ ಮೂಲಗಳ ಪ್ರಕಾರ ದಸರೆ ಬಳಿಕ ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಅವರು ಮಗುವಿಗೆ ಜನ್ಮನೀಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.