
ಬೆಂಗಳೂರು (ನ.02): ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿರುದ್ಧದ ಪ್ರಕರಣವೊಂದಕ್ಕೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಎಸಿಬಿ ಇತಿಶ್ರೀ ಹಾಡಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರಗೆ ಎದುರಾಗಿದ್ದ ದೊಡ್ಡ ಕುತ್ತು ದೂರಾಗಿದೆ.
ಮ್ಯಾಟ್ರಿಕ್ಸ್ ಇಮೆಂಜಿಂಗ್ ಕಂಪನಿ ಟೆಂಡರ್'ನಲ್ಲಿ ಯತೀಂದ್ರ ವಿರುದ್ಧ ಅಕ್ರಮ ನಡೆಸಿರುವ ಆರೋಪ ಕೇಳಿ ಬಂದಿತ್ತು. ಡಿವೈಎಸ್ಪಿ ವಜೀರ್ ಅಲಿ ಖಾನ್ ನೇತೃತ್ವದಲ್ಲಿ ಪ್ರಕರಣ ತನಿಖೆ ನಡೆದಿತ್ತು. ಸೂಕ್ತ ಸಾಕ್ಷ್ಯಾಧರವಿಲ್ಲ ಎಂಬ ನೆಪ ನೀಡಿ ಪ್ರಕರಣವನ್ನು ಎಸಿಬಿ ಮುಕ್ತಾಯಗೊಳಿಸಿದೆ. ಆರ್ಟಿಐ ಕಾರ್ಯಕರ್ತ ಭಾಸ್ಕರನ್ ಎಸಿಬಿಗೆ ಯತೀಂದ್ರ ವಿರುದ್ಧ ದೂರು ನೀಡಿದ್ದರು. ಯತೀಂದ್ರ ಕೇಸ್ನಿಂದ ಮುಕ್ತರಾಗಿದ್ದಕ್ಕೆ ನಿರಾಳರಾಗಿದ್ದಾರೆ. ಇನ್ನು ಈ ಕುರಿತು ಕೋರ್ಟ್ನಲ್ಲಿ ಹೋರಾಟ ಮುಂದುವರಿಸಲು ಭಾಸ್ಕರನ್ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.