'ಯಡಿಯೂರಪ್ಪ ಇನ್ನೆಂದಿಗೂ ಸಿಎಂ ಆಗಲ್ಲ'

Published : Dec 07, 2018, 12:59 PM ISTUpdated : Dec 07, 2018, 01:42 PM IST
'ಯಡಿಯೂರಪ್ಪ ಇನ್ನೆಂದಿಗೂ ಸಿಎಂ ಆಗಲ್ಲ'

ಸಾರಾಂಶ

ಬಿಜೆಪಿ ಮುಖಂಡ ಬಿ.ಎಸ್ ಯಡಿಯೂರಪ್ಪ ಇನ್ನೆಂದಿಗೂ ರಾಜ್ಯದ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಹೇಳಿದ್ದಾರೆ. 

ಶಿವಮೊಗ್ಗ :  ರಾಜ್ಯದಲ್ಲಿ ಯಡಿಯೂರಪ್ಪ ನಂ 1 ನಾಲಾಯಕ್ ಮುಖ್ಯಮಂತ್ರಿ ಆಗಿದ್ದವರು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ  ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ. 

 ಬಿಎಸ್ ವೈ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಭೇಟಿ ವಿಚಾರವನ್ನೂ ಪ್ರಸ್ತಾಪಿಸಿದ ಅವರು ಬಂಗಾರಪ್ಪನವರು ಶಂಕುಸ್ಥಾಪನೆ ನೆರವೇರಿಸಿದ್ದ ನದಿ ಯೋಜನೆಯನ್ನು ಈಗ ಜಾರಿಗೊಳಿಸಲು ಪತ್ರ ಕೊಟ್ಟಿದ್ದಾರೆ.  ಈ ಸರ್ಕಾರ ಐಸಿಯು ನಲ್ಲಿದೆ, ಟೇಕಾಫ್ ಆಗಿಲ್ಲ, ಸರ್ಕಾರ ಸತ್ತು ಹೋಗಿದೆ ಎಂದು ಹೇಳುವ ಯಡಿಯೂರಪ್ಪ ಡಿಕೆಶಿ ಭೇಟಿ ಮೂಲಕ ರಾಜಕೀಯ ಧೃವೀಕರಣ ಆಗುತ್ತೆ ಅನ್ನುವ ಸ್ಟಂಟ್ ಮಾಡುತ್ತಾರೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ. 

ಅಧಿಕಾರದಲ್ಲಿದ್ದಾಗ ಜಿಲ್ಲೆಯ ಯಾವ ನದಿ ಯೋಜನೆಯನ್ನು ಅನುಷ್ಠಾನ ಮಾಡಲಿಲ್ಲ.  ಕಚವಿ ಏತ ನೀರಾವರಿ ಯೋಜನೆ , ತಾಳಗುಂದ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ತರಲು ಸಿಎಂ ಕುಮಾರಸ್ವಾಮಿ ಬದ್ಧರಾಗಿದ್ದಾರೆ. ಈ ಸರ್ಕಾರ ಬೀಳಿಸುವ ಮಾತಾಡುವ ಯಡಿಯೂರಪ್ಪ ಅವರಿಗೆ ಮಾನ ಮಾರ್ಯಾದೆ, ನಾಚಿಕೆ ಇದೆಯಾ ? ಇವರು ಒಂದು ವಿಕೆಟ್ ತೆಗೆದರೆ ಕುಮಾರಸ್ವಾಮಿ, ಡಿಕೆಶಿ ಗೆ 10 ವಿಕೆಟ್ ತೆಗೆಯುವ ತಾಕತ್ತಿದೆ ಎಂದು ಹೇಳಿದ್ದಾರೆ. 

ರಾಮಜಪ :  ಕಸ್ತೂರಿ ರಂಗನ್ ವರದಿ ಜಾರಿಯಾದರೆ 570 ಹಳ್ಳಿಗಳಿಗೆ ತೊಂದರೆ ಆಗುತ್ತದೆ. ಈ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿಲ್ಲ. ಬಿಜೆಪಿಯವರದ್ದು ಕಾಮ್ ಕಿ ಬಾತ್ ಮುಗಿದಿದ್ದು,  ಇನ್ನೆನಿದ್ದರೂ ರಾಮ್ ಕಿ ಬಾತ್ ಶುರುವಾಗಿದೆ. ಚುನಾವಣೆ ಬಂದಾಗ ರಾಮಜಪ ಮಾಡುವ ಬುದ್ದಿಯನ್ನು ಬಿಡಬೇಕು ಎಂದು ರಾಮಮಂದಿರ ನಿರ್ಮಾಣ ವಿಚಾರದ ಬಗ್ಗೆಯೂ ಮಧು ಬಂಗಾರಪ್ಪ ಪ್ರಸ್ತಾಪಿಸಿದ್ದಾರೆ. 
 
ಆಪರೇಷನ್ ಕಮಲ ಪ್ರಸ್ತಾಪ : ಇದೇ ವೇಳೆ ಆಪರೇಷನ್ ಕಮಲ ವಿಚಾರದ ಬಗ್ಗೆಯೂ ಮಾತನಾಡಿದ ಮಧು ಬಂಗಾರಪ್ಪ ನಮ್ಮ ಶಾಸಕರು ಯಾರಿಗೂ ಸೇಲ್ ಆಗುವ ಪ್ರಾಡೆಕ್ಟ್ ಅಲ್ಲ.  ಶಾಸಕರ ಖರೀದಿಸುವ ದುಸ್ಸಾಹಸ ಕೈ ಬಿಡಿ.  ಡಿ ಕೆ ಶಿವಕುಮಾರ್ ಮೇಲೆ ಯಾರು ಕೇಸ್ ಹಾಕಿಸಿದ್ರು ಎಂಬುದು ಗೊತ್ತಿದೆ. ಅದನ್ನು ನಾನು ಬಹಿರಂಗ ಪಡಿಸಿಲ್ಲ ಎಂದಿದ್ದಾರೆ. 

 ಇನ್ನು ರಾಜ್ಯದಲ್ಲಿ ಹಿಂದೆ ಸಿಎಂ ಆಗಿದ್ದಾಗ ಉತ್ತಮ ಆಡಳಿತ ನೀಡದ ಯಡಿಯೂರಪ್ಪ ಇನ್ನೂ ಯಾವತ್ತೂ ರಾಜ್ಯದಲ್ಲಿ ಸಿಎಂ ಆಗುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?